ಉದಯವಾಹಿನಿ,ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಜುಲೈ 3 ರಂದು ದೆಹಲಿಯಲ್ಲಿರುವ ತಮ್ಮ ಪಕ್ಷದ ಕೇಂದ್ರ ಕಚೇರಿಯಲ್ಲಿ ಕೇಂದ್ರದ ಸುಗ್ರೀವಾಜ್ಞೆಯ ಪ್ರತಿಗಳನ್ನು ಸುಡುವುದಾಗಿ ಘೋಷಿಸಿದ್ದರು. ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ಕೇಂದ್ರದ ಸುಗ್ರೀವಾಜ್ಞೆ ಕುರಿತು ದೆಹಲಿಯ ಆಮ್ ಆದ್ಮಿ ಪಕ್ಷ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಅರವಿಂದ್ ಕೇಜ್ರಿವಾಲ್ ಸರ್ಕಾರದ ಪರವಾಗಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಮೇಲ್ಮನವಿಯಲ್ಲಿ, ಕೇಂದ್ರದ ಸುಗ್ರೀವಾಜ್ಞೆ ಅಸಾಂವಿಧಾನಿಕವಾಗಿದ್ದು, ಅದನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದು ಹೇಳಲಾಗಿದೆ. ಜುಲೈ 3 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಕ್ಯಾಬಿನೆಟ್ ಸಚಿವರು ಮತ್ತು ಎಲ್ಲಾ ಶಾಸಕರು ಈ ಕರಾಳ ಸುಗ್ರೀವಾಜ್ಞೆಯ ಪ್ರತಿಗಳನ್ನು ಐಟಿಒನಲ್ಲಿರುವ ಪಕ್ಷದ ಕಚೇರಿಯಲ್ಲಿ ಸುಡಲಿದ್ದಾರೆ.

ಇದಾದ ಬಳಿಕ ಜುಲೈ 5ರಂದು ಎಲ್ಲ 70 ವಿಧಾನಸಭಾ ಕ್ಷೇತ್ರಗಳಲ್ಲಿ ಸುಗ್ರೀವಾಜ್ಞೆ ಪ್ರತಿಯನ್ನು ಸುಡಲಾಗುವುದು. ಜುಲೈ 6 ಮತ್ತು ಜುಲೈ 13 ರ ನಡುವೆ, ದೆಹಲಿಯ ಪ್ರತಿಯೊಂದು ಮೂಲೆ, ವೃತ್ತ, ರಸ್ತೆ ವಿಭಜಕ ಮತ್ತು ಗಲ್ಲಿಗಳಲ್ಲಿ ಸುಗ್ರೀವಾಜ್ಞೆಯ ಪ್ರತಿಗಳನ್ನು ಸುಡಲಾಗುವುದು ಎನ್ನಲಾಗಿದೆ. ದೆಹಲಿಯ ಪ್ರತಿ ಪ್ರದೇಶದಲ್ಲಿ ಪ್ರತಿಗಳನ್ನು ಸುಡುವುದನ್ನು ಎಲ್ಲಾ 7 ಉಪಾಧ್ಯಕ್ಷರು ಖಚಿತಪಡಿಸಿಕೊಳ್ಳಲಿದ್ದಾರೆ ಎಂದು ದೆಹಲಿ ಸರ್ಕಾರದ ಸಚಿವ ಸೌರಭ್ ಭಾರದ್ವಾಜ್ ಹೇಳಿದ್ದಾರೆ. ಈ ಕರಾಳ ಸುಗ್ರೀವಾಜ್ಞೆ ಮೂಲಕ ದೆಹಲಿಯನ್ನು ಅಕ್ರಮವಾಗಿ ನಿಯಂತ್ರಿಸಲು ಕೇಂದ್ರ ಪ್ರಯತ್ನಿಸುತ್ತಿದೆ ಎಂದು ಭಾರದ್ವಾಜ್ ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!