ಉದಯವಾಹಿನಿ, ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಧರ್ಮಸ್ಥಳ ಪ್ರಕರಣ ಖಾಲಿ ಡಬ್ಬ, ದೊಡ್ಡ ಷಡ್ಯಂತ್ರ ಎಂದಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಈಗ ಬುರುಡೆ ಗ್ಯಾಂಗ್‌ ಷಡ್ಯಂತ್ರದ ಕುರಿತು ಮತ್ತೊಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಬುರುಡೆಯನ್ನ ದೆಹಲಿಗೆ ಎತ್ತಿಕೊಂಡು ಹೋಗಿದ್ದೂ ಗೊತ್ತು, ಸುಪ್ರೀಂ ಕೋರ್ಟ್‌ಗೆ ಹೋಗಿದ್ದೂ ಗೊತ್ತು ಎಂದು ಬಾಂಬ್‌ ಸಿಡಿಸಿದ್ದಾರೆ.
ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಕೆಶಿ ವಾಸ್ತವಾಂಶ ಜನರಿಗೆ ತಿಳಿಸಬೇಕು ಅನ್ನೋದು ನಮ್ಮ ಆಸೆ. ರಾಜಕೀಯ ಯಾರೂ ಏನ್ ಬೇಕಾದರೂ ಮಾತಾಡಬಹುದು. ನಾನು ಮಾತಾಡಿದ್ರೆ ಸರ್ಕಾರದ ಹೇಳಿಕೆ ಆಗುತ್ತೆ. ಅಂತಿಮ ವರದಿ ಬರಲಿ, ಮಾತಾಡ್ತೀನಿ. ಹೋಮ್ ಮಿನಿಸ್ಟರ್, ಸಿಎಂ ಅಧಿಕೃತ ಸ್ಟೇಟ್ಮೆಂಟ್ ಮಾಡ್ತಾರೆ ಎಂದು ಹೇಳಿದ್ದಾರೆ.
ಮುಂದುವರಿದು… ಬುರುಡೆ ಡೆಲ್ಲಿಗೆ ಎತ್ತಿಕೊಂಡು ಹೋಗಿದ್ದು ಗೊತ್ತೂ, ನಮಗೆ ಆ ಮಾಹಿತಿ ಇದೆ. ಸುಪ್ರೀಂ ಕೋರ್ಟ್‌ಗೆ ಹೋಗಿದ್ದೂ ಗೊತ್ತು. ಪಿಐಎಲ್ ಹಾಕಿದ್ದು ಗೊತ್ತು, ಅಲ್ಲಿ ರಿಜೆಕ್ಟ್ ಆಗಿದ್ದು ಗೊತ್ತು. ಆದ್ರೆ ಪೊಲೀಸ್ ಇಲಾಖೆ ಅವರು ತನಿಖೆ ಮಾಡ್ತಿದ್ದಾರೆ, ವರದಿ ಕೊಡ್ತಾರೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!