ಉದಯವಾಹಿನಿ, ಬೆಂಗಳೂರು: ನಗರದಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ್ದ ದುರಂತದಲ್ಲಿ 11 ಜನ ಸಾವನ್ನಪ್ಪಿದ್ದರು. ಅದೇ ದೊಡ್ಡ ಆಘಾತವಾಗಿತ್ತು. ಈಗ ಕರೂರಿನಲ್ಲಿ ಅದಕ್ಕಿಂತಲೂ ದೊಡ್ಡ ದುರಂತವಾಗಿದೆ. ಕರೂರು ಕಾಲ್ತುಳಿದ ದುರಂತಕ್ಕೆ ಇಡೀ ದೇಶ ಬೆಚ್ಚಿಬಿದ್ದಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆತಂಕ ಹೊರಹಾಕಿದ್ದಾರೆ.
ನಗರದಲ್ಲಿ ಅವರು ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ, ನಟ ವಿಜಯ್ ಕಾರ್ಯಕ್ರಮದಲ್ಲಿ ಕಾಲ್ತುಳಿತ ಪ್ರಕರಣದ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು. ಇಂಥ ಘಟನೆ ದೇಶದ ಬೇರೆ ಕಡೆ ಎಲ್ಲೂ ಆಗಿಲ್ಲ. ದುರ್ಘಟನೆಯಲ್ಲಿ ಚಿಕ್ಕ ಮಕ್ಕಳೂ ಸಾವನ್ನಪ್ಪಿದ್ದಾರೆ. ಈ ದುರಂತಕ್ಕೆ ಇಡೀ ದೇಶ ಬೆಚ್ಚಿಬಿದ್ದಿದೆ ಎಂದಿದ್ದಾರೆ. ಕರೂರು ದುರಂತ ಸಾರ್ವಜನಿಕರಿಗೆ ದೊಡ್ಡ ದಿಗ್ಭ್ರಾಂತಿ ತಂದಿದೆ. ಡಿಎಂಕೆ ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಂಡು ವಿಜಯ್ ತಲೆಗೆ ಪ್ರಕರಣ ಕಟ್ಟುತ್ತಿದೆ. ಅವರು ಸ್ಥಳ ಕೇಳಿದ್ದೆಲ್ಲಿ? ಅಲ್ಲಿನ ಸರ್ಕಾರ ಅನುಮತಿ ಕೊಟ್ಟಿದ್ದೆಲ್ಲಿ? ವಿಜಯ್ ಬಂದು ರ‍್ಯಾಲಿ ಮಾಡಿದ್ರು ಹೋದ್ರು, ಅವರದ್ದೂ ತಪ್ಪಿದೆ. ವಿಜಯ್ ಕ್ಷಮೆ ಕೇಳಿಲ್ಲ, ಆಸ್ಪತ್ರೆಗೆ ಹೋಗಲಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

Leave a Reply

Your email address will not be published. Required fields are marked *

error: Content is protected !!