ಉದಯವಾಹಿನಿ, ದಕ್ಷಿಣ ಕನ್ನಡ: ಭಾರತ ತಂಡದ ಕಿಕ್ರೆಟಿಗ ಅಜಿಂಕ್ಯ ರಹಾನೆ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿ ದರ್ಶನ ಪಡೆದರು.
ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯಲ್ಲಿರುವ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಬುಧವಾರ (ಅ.1) ಭೇಟಿ ನೀಡಿದರು. ಈ ವೇಳೆ ಅರ್ಚಕ ಗೋಪಾಲಕೃಷ್ಣ ಭಟ್ ಪ್ರಾರ್ಥನೆ ಸಲ್ಲಿಸಿ ಪ್ರಸಾದ ನೀಡಿದರು.
ಮಂಗಳೂರಿನ ಕರಾವಳಿ ಮೈದಾನದಲ್ಲಿ ಆಯೋಜಿಸಲಾಗಿದ್ದ 10ನೇ ವರ್ಷದ ಪಿಲಿನಲಿಕೆ ಸಂಭ್ರಮಕ್ಕೆ ವಿಶೇಷ ಅತಿಥಿಯಾಗಿ ಅಜಿಂಕ್ಯ ರಹಾನೆ ಆಗಮಿಸಿದ್ದರು. ಈ ವೇಳೆ ಮುಂಬೈ ಕ್ರಿಕೆಟ್ ಅಸೋಸಿಯೇಷನ್ನ ಜೊತೆ ಕಾರ್ಯದರ್ಶಿ ಡಾ. ಪಿ ವಿ ಶೆಟ್ಟಿ ಬಪ್ಪನಾಡು ಕ್ಷೇತ್ರಕ್ಕೆ ಬರಮಾಡಿಕೊಂಡರು. ಕ್ಷೇತ್ರದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತ ಅರಸರು, ಕಾರ್ಯನಿರ್ವಣಾಧಿಕಾರಿ ಶ್ವೇತಾ ಪಳ್ಳಿ, ನಾಗಸ್ವರ ವಾದಕ ನಾಗೇಶ್ ಬಪ್ಪನಾಡು, ಅಕೌಂಟೆಂಟ್ ಶಿವಶಂಕರ್
ಮುಲ್ಕಿ ವಿಜಯ ರೈತ ಸೊಸೈಟಿಯ ನಿರ್ದೇಶಕ ದೇವಿಪ್ರಸಾದ್ ಕೆಂಪುಗುಡ್ಡೆ, ಕಾರ್ತಿಕ್ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.
