ಉದಯವಾಹಿನಿ, ಬೀದರ್: ಅರಬ್ಬಿ ಸಮುದ್ರದಲ್ಲಿ ಶಕ್ತಿ ಚಂಡಮಾರುತದ ಹಿನ್ನೆಲೆ ಗಡಿಜಿಲ್ಲೆ ಬೀದರ್‌ನಲ್ಲಿ ವರುಣಾರ್ಭಟ ಜೋರಾಗಿದೆ.
ಸೋಮವಾರ ಬೆಳಗ್ಗೆಯಿಂದ ಬಿಟ್ಟು ಬಿಡದೇ ಧಾರಾಕಾರ ಮಳೆ ಸುರಿಯುತ್ತಿದ್ದು, ಗುಡುಗು, ಬಿರುಗಾಳಿ ಸಹಿತ ವರುಣ ಅಬ್ಬರಿಸುತ್ತಿದ್ದಾನೆ. ಬೀದರ್, ಹುಮ್ನಾಬಾದ್, ಬಸವ ಕಲ್ಯಾಣ, ಭಾಲ್ಕಿ, ಔರಾದ್ ಸೇರಿದಂತೆ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಹೋಗಲು ಪರದಾಡುವಂತಾಗಿದ್ದು, ಇತ್ತ ಕಚೇರಿ ಕೆಲಸಗಳಿಗೆ ಹೋಗಲು ಜನರು ಕೂಡ ಹೈರಾಣಾಗುತ್ತಿದ್ದಾರೆ. ಹವಾಮಾನ ಇಲಾಖೆಯ ಪ್ರಕಾರ ಇಂದು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!