ಉದಯವಾಹಿನಿ, ಅಮರಾವತಿ: ಪಟಾಕಿ ತಯಾರಿಕಾ ಘಟಕದಲ್ಲಿ ಭೀಕರ ಸ್ಫೋಟ ಸಂಭವಿಸಿ, 6 ಮಂದಿ ಸಜೀವ ದಹನವಾಗಿರುವ ಘಟನೆ ಆಂಧ್ರಪ್ರದೇಶದ ಅಂಬೇಡ್ಕರ್ ಕೊನಸೀಮಾ ಜಿಲ್ಲೆಯಲ್ಲಿ ಸಂಭವಿಸಿದೆ. ರಾಯವರಂ ಮಂಡಲದ ರಾಯವರಂ ಲಕ್ಷ್ಮಿ ಗಣಪತಿ ಪಟಾಕಿ ತಯಾರಿಕಾ ಕೇಂದ್ರದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಪಟಾಕಿ ತಯಾರಿಸುತ್ತಿದ್ದಾಗ ಅವಘಡ ಸಂಭವಿಸಿದೆ. ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ 6 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ, ಬೆಂಕಿ ನಂದಿಸುವ ಕಾರ್ಯವನ್ನು ಆರಂಭಿಸಿದ್ದಾರೆ. ಮೃತರು ಮತ್ತು ಗಾಯಗೊಂಡವರನ್ನು ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕರು ಎಂದು ಗುರುತಿಸಲಾಗಿದೆ ಎಂದು ಜಿಲ್ಲಾ ಡಿಎಸ್ಪಿ ರಾಹುಲ್ ಮೀನಾ ತಿಳಿಸಿದ್ದಾರೆ.
