ಉದಯವಾಹಿನಿ, ಚಿತ್ರದುರ್ಗ: ಅಕ್ರಮ ಆನ್ಲೈನ್ ಹಾಗೂ ಆಫ್ಲೈನ್ ಬೆಟ್ಟಿಂಗ್ ಪ್ರಕರಣದಡಿ ಬಂಧನೊಕ್ಕಳಗಾಗಿರುವ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ.
ಚಳ್ಳಕೆರೆಯ ಫೆಡರಲ್ ಬ್ಯಾಂಕ್ನಲ್ಲಿ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಅಲ್ಲದೇ ಚಳ್ಳಕೆರೆ ಪಟ್ಟಣದ ಹಲವೆಡೆ ಇಡಿ ಅಧಿಕಾರಿಗಳು ಶೋಧ ನಡೆಸಿದ್ದಾರೆ. ಆನ್ಲೈನ್ ಬೆಟ್ಟಿಂಗ್ನಲ್ಲಿ ಅಲ್ಪಾವಧಿಯಲ್ಲಿಯೇ 2,000 ಕೋಟಿ ರೂ. ಲಾಭಗಳಿಸಿದ್ದಾರೆ ಎಂಬುದು ಇಡಿ ದಾಳಿ ವೇಳೆ ಬಯಲಾಗಿತ್ತು.
ಆಗಸ್ಟ್ 29ರಂದು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದ ಇಡಿ ಅಧಿಕಾರಿಗಳು ಅಕ್ರಮ ಆನ್ಲೈನ್ ಹಾಗೂ ಆಫ್ಲೈನ್ ಬೆಟ್ಟಿಂಗ್ ಪ್ರಕರಣದಡಿ ಶಾಸಕ ವೀರೇಂದ್ರ ಪಪ್ಪಿಯನ್ನು ಸಿಕ್ಕಿಂನಿಂದ ಕರೆತಂದು ಬಂಧಿಸಿದ್ದರು. ಬೆಳಗಿನ ಜಾವ 5:30ರಿಂದ ಮಧ್ಯರಾತ್ರಿ 12:45 ರವರೆಗೆ ಶಾಸಕ ವೀರೇಂದ್ರ ಪಪ್ಪಿ ಹಾಗೂ ಅವರ ಸಹೋದರರಾದ ಕೆಸಿ ತಿಪ್ಪೇಸ್ವಾಮಿ ಹಾಗೂ ನಾಗರಾಜ್ ಮನೆಯಲ್ಲೂ ಸಹ ತೀವ್ರ ಶೋಧ ನಡೆಸಿ ಕೊನೆಗೆ ದಾಖಲೆಯೊಂದಿಗೆ ಅಧಿಕಾರಿಗಳು ವಾಪಸ್ ಹೋಗಿದ್ದರು. ಶಾಸಕರ ಒಡೆತನದಲ್ಲಿ ಗೋವಾದಲ್ಲಿ ನಡೆಯುತ್ತಿರುವ ಕ್ಯಾಸಿನೋ ಹಾಗೂ ಚಿತ್ರದುರ್ಗ ಹಾಗೂ ಬೆಂಗಳೂರು ಮತ್ತು ಸಿಕ್ಕಿಂನಲ್ಲಿರುವ ಮನೆಗಳಲ್ಲೂ ಏಕಕಾಲದಲ್ಲಿ ದಾಳಿ ನಡೆಸಲಾಗಿತ್ತು.
