ಉದಯವಾಹಿನಿ, ಕೊಪ್ಪಳ: ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಇದು ನನ್ನ ಅಭಿಲಾಷೆ ಎಂದು ರಾಮನಗರ ‘ಕೈ’ ಶಾಸಕ ಇಕ್ಬಾಲ್ ಹುಸೇನ್ ಮತ್ತೆ ಪುನರುಚ್ಚರಿಸಿದ್ದಾರೆ. ಈ ಕುರಿತು ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಸ್ಪಷ್ಟ ಅಭಿಪ್ರಾಯವನ್ನು ನಾನು ಹೈಕಮಾಂಡ್‌ಗೆ ತಿಳಿಸಿದ್ದೇನೆ. ನಾನು ಇದಕ್ಕೆ ಬದ್ಧ. ಕಾಂಗ್ರೆಸ್ ಶಿಸ್ತಿನ ಪಕ್ಷ. ಈ ಕುರಿತು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಮಲ್ಲಿಕಾರ್ಜುನ ಖರ್ಗೆ, ಸೋನಿಯಾ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.ನಾನು ನನ್ನ ಅನಿಸಿಕೆ, ಆಸೆ, ಅಭಿಲಾಷೆಯನ್ನು ಸ್ಪಷ್ಟವಾಗಿ ಹೇಳಿದ್ದೇನೆ. ಇದಕ್ಕೆ ನಾನು ಬದ್ಧವಾಗಿದ್ದೇನೆ. ನಾನು ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಅಂತಾ ಹಿಂದೆನೂ ಹೇಳಿದ್ದೆ, ಈಗಲೂ ಹೇಳುತ್ತೇನೆ ಎಂದು ನುಡಿದರು.

Leave a Reply

Your email address will not be published. Required fields are marked *

error: Content is protected !!