ಉದಯವಾಹಿನಿ, ಬೆಂಗಳೂರು: ಬಾಂಬೆ ಮಾದರಿಯಲ್ಲಿ ಕೊಳೆಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ.ಶಿವಕುಮಾರ್ , ಜಿಬಿಎ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಬಿಎ ಸಭಾಂಗಣದಲ್ಲಿ ಶುಕ್ರವಾರ ನಡೆದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸಮಿತಿಯ ಮೊದಲ ಸಭೆಯಲ್ಲಿ ಸಚಿವ ಜಮೀರ್ ಅಹ್ಮದ್ ಅವರು ಬೆಂಗಳೂರಿನಲ್ಲಿ 480 ಕೊಳಗೇರಿ ಪ್ರದೇಶಗಳಿದ್ದು, ಅವುಗಳ ಅಭಿವೃದ್ಧಿ ಆಗಬೇಕು ಎಂದು ವಿಷಯ ಪ್ರಸ್ತಾಪಿಸಿದಾಗ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರಿನಲ್ಲಿ ಈ ಹಿಂದೆ ಶಾಂತಿನಗರದಲ್ಲಿ ಈ ಪ್ರಯತ್ನಕ್ಕೆ ಮುಂದಾಗಿದ್ದೆವು. ಅದು ಯಶಸ್ವಿಯಾಗಲಿಲ್ಲ. ಹೀಗಾಗಿ, ಜನರು ಈ ವಿಚಾರದಲ್ಲಿ ಹಿಂಜರಿಯುತ್ತಾರೆ. ಅದಕ್ಕಾಗಿ ಈ ಕೊಳಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಿ ಎಂದು ತಿಳಿಸಿದರು. ನಮ್ಮ ಕ್ಷೇತ್ರದಲ್ಲಿ ಕಸದ ಸಮಸ್ಯೆ ಹೆಚ್ಚಾಗಿದ್ದು, ಇದಕ್ಕೆ ಪರಿಹಾರಬೇಕು. ಇದನ್ನು ಜಿಬಿಎ ನಿಭಾಯಿಸುವುದೇ ಅಥವಾ ಪಾಲಿಕೆ ನಿಭಾಯಿಸುವುದೇ ಎಂದು ಶಾಸಕ ಎ.ಸಿ.ಶ್ರೀನಿವಾಸ್ ಅವರು ಕೇಳಿದಾಗ, ಕಸ ವಿಲೇವಾರಿ ವಿಚಾರವಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಂದರಂತೆ 33 ಪ್ಯಾಕೇಜ್ ಟೆಂಡರ್ ಕರೆಯಲಾಗುವುದು. ಈ ವಿಚಾರ ನ್ಯಾಯಾಲಯದಲ್ಲಿದ್ದು, ಶೀಘ್ರವೇ ತೀರ್ಪು ಬರಲಿದ್ದು, ನಂತರ ಈ ಕಾರ್ಯ ಮಾಡಲಾಗುವುದು. ಕಸ ವಿಲೇವಾರಿ ಜವಾಬ್ದಾರಿ ಸ್ಥಳೀಯ ಪಾಲಿಕೆಗಳು ನಿಭಾಯಿಸಲಿವೆ. ಇದರ ಸಮನ್ವಯತೆಯನ್ನು ಜಿಬಿಎ ಪಾಲಿಸಲಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!