ಉದಯವಾಹಿನಿ, ರಾಂಚಿ: ಜಾರ್ಖಂಡ್‌ನಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಫೋಟಗೊಂಡು ಗಾಯಗೊಂಡಿದ್ದ ಸಿಆರ್‌ಪಿಎಫ್ (CRPF) ಜವಾನರೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಜರೈಕೇಲಾ ಪೊಲೀಸ್ ಠಾಣೆ ವ್ಯಾಪ್ತಿಯ ಬಾಬುಡೇರಾ-ಸಮತಾ ಅಕ್ಷದ ಮಾವೋವಾದಿ ಹಿಂಸಾಚಾರ ಪೀಡಿತ ಪ್ರದೇಶದಲ್ಲಿ ಶುಕ್ರವಾರ ಅರೆಸೈನಿಕ ಪಡೆ ಈ ಕಾರ್ಯಾಚರಣೆಯನ್ನು ಕೈಗೊಂಡಿದೆ.
ಕಾರ್ಯಾಚರಣೆಯ ಸಮಯದಲ್ಲಿ ಸುಧಾರಿತ ಸ್ಫೋಟಕ ಸಾಧನ (ಐಇಡಿ)ದಿಂದ ಹೆಡ್ ಕಾನ್‌ಸ್ಟೆಬಲ್ ಮಹೇಂದ್ರ ಲಸ್ಕರ್ (45) ಗಾಯಗೊಂಡಿದ್ದು, ನಂತರ ಅವರನ್ನು ಆಸ್ಪತ್ರೆಗೆ ದಾಖಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಲಸ್ಕರ್ ಅಸ್ಸಾಂ ಮೂಲದವರಾಗಿದ್ದು, ಸಿಆರ್‌ಪಿಎಫ್‌ನ 60 ನೇ ಬೆಟಾಲಿಯನ್‌ಗೆ ಸೇರಿದವರು.
ಕಳೆದ ವಾರ ಪಶ್ಚಿಮ ಸಿಂಗ್‌ಭೂಮ್‌ನ ಸಾರಂಡಾ ಕಾಡಿನಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಯ ಸಮಯದಲ್ಲಿ ಹಾವು ಕಚ್ಚಿದ ನಂತರ ಸಿಆರ್‌ಪಿಎಫ್ ಯೋಧ ಮೃತಪಟ್ಟಿದ್ದರು. ಜಾರ್ಖಂಡ್ ಪೊಲೀಸ್ ಪ್ರಧಾನ ಕಚೇರಿಯಿಂದ ಬಂದ ಮಾಹಿತಿ ಪ್ರಕಾರ, 209 ಕೋಬ್ರಾ ಬೆಟಾಲಿಯನ್ ಸಾರಂಡಾದ ಛೋಟಾ ನಗರ ಕಾಡುಗಳಲ್ಲಿ ಮಾವೋವಾದಿಗಳ ವಿರುದ್ಧ ಶೋಧ ಕಾರ್ಯಾಚರಣೆ ನಡೆಸುತ್ತಿತ್ತು. ಈವೇಳೆ, ಉತ್ತರ ಪ್ರದೇಶದ ದಿಯೋರಿಯಾ ಮೂಲದ ಕಾನ್‌ಸ್ಟೆಬಲ್ ಸಂದೀಪ್ ಕುಮಾರ್ ಅವರಿಗೆ ವಿಷಪೂರಿತ ಹಾವು ಕಚ್ಚಿದೆ. ಹಾವು ಕಡಿತದ ಬಗ್ಗೆ ಮಾಹಿತಿ ಪಡೆದ ತಕ್ಷಣ, ಅವರನ್ನು ಕೊಲೆಬಿರಾದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಸಂದೀಪ್ ಕುಮಾರ್ ಮೃತಪಟ್ಟಿದ್ದಾರೆ.

Leave a Reply

Your email address will not be published. Required fields are marked *

error: Content is protected !!