ಉದಯವಾಹಿನಿ,ಮಂಗಳೂರು: ಸೌಜನ್ಯ ಅತ್ಯಾಚಾರ, ಹತ್ಯೆ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ನೈಜ‌ ಅರೋಪಿಗಳಿಗೆ ಶಿಕ್ಷೆಯಾಗಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ಆದರೆ, ಇದೀಗ ಸೌಜನ್ಯ ಪರವಾದ ನ್ಯಾಯದ ಹೋರಾಟಕ್ಕೆ ಒಡನಾಡಿ ಸಂಸ್ಥೆ ಬೆಂಬಲ ನೀಡಿದ್ದು, ರಾಜ್ಯಾದ್ಯಂತ ಸೌಜನ್ಯ ಪರವಾಗಿ ಹೋರಾಟ ನಡೆಸಲು ಒಡನಾಡಿ ಸಂಸ್ಥೆ ಸಿದ್ದವಾಗಿದೆ. ನಿನ್ನೆ ಸೌಜನ್ಯ ಪರ ಹೋರಾಟಗಾರರನ್ನ ಭೇಟಿಯಾದ ಒಡನಾಡಿಯ ಸ್ಥಾಪಕ ಕಾರ್ಯದರ್ಶಿ ಸ್ಟಾಲಿನ್ ಅವರು ಮಾತನಾಡಿ, ಧರ್ಮಸ್ಥಳ ಕ್ಷೇತ್ರದಲ್ಲಿ ನಡೆದ ಸೌಜನ್ಯ ಪ್ರಕರಣ ತಲೆ ತಗ್ಗಿಸುವಂತಹ ಘಟನೆ. ಅತ್ಯಾಚಾರ ಮಾಡಿದ ಪಾಪಿಗಳನ್ನು ಇನ್ನೂ ನ್ಯಾಯದ ಕಟಕಟೆಗೆ ತರಲಾಗಿಲ್ಲ. ಸಿಬಿಐ ಘನತೆಯನ್ನ ಉಳ್ಳಿಸಿಕೊಳ್ಳುವ ನಿಟ್ಟಿನಲ್ಲಿ ಮತ್ತೆ ಮರುತನಿಖೆಯಾಗಬೇಕು. ನಾವು ಈ ಹೋರಾಟದಲ್ಲಿ ಕೈ ಜೋಡಿಸುತ್ತಿದ್ದೇವೆ ಎಂದರು.

Leave a Reply

Your email address will not be published. Required fields are marked *

error: Content is protected !!