ಉದಯವಾಹಿನಿ, ಮುಂಬೈ: ಭಾರತ ಏಕದಿನ ತಂಡದ ನಾಯಕತ್ವವನ್ನು ಕಳೆದುಕೊಂಡಿರುವ ರೋಹಿತ್ ಶರ್ಮಾ (Rohit Sharma), ಆಸ್ಟ್ರೇಲಿಯಾ ವಿರುದ್ಧ ಮುಂಬರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಸಜ್ಜಾಗುತ್ತಿದ್ದಾರೆ. ಈ ಸರಣಿಯ ತಯಾರಿ ಅಂಗವಾಗಿ ಅವರು ಮುಂಬೈನ ಶಿವಾಜಿ ಪಾರ್ಕ್ನಲ್ಲಿ ಬ್ಯಾಟಿಂಗ್ ಅಭ್ಯಾಸವನ್ನು ನಡೆಸಿದರು. ಈ ವೇಳೆ ರೋಹಿತ್ ಶರ್ಮಾ ಅವರು ಯುವ ಅಭಿಮಾನಿಯನ್ನು ಹತ್ತಿರಕ್ಕೆ ಕರೆಸಿಕೊಂಡರು. ಆ ಮೂಲಕ ಹಿಟ್ಮ್ಯಾನ್ ಹೃದಯವಂತಿಕೆಯನ್ನು ಮೆರೆದಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ರೋಹಿತ್ ಶರ್ಮಾ ಅವರನ್ನು ನೋಡಲು ಶಿವಾಜಿ ಪಾರ್ಕ್ಗೆ ನೂರಾರು ಮಂದಿ ಅಭಿಮಾನಿಗಳು ಬಂದಿದ್ದರು. ಈ ವೇಳೆ ಬಾಲಕನೊಬ್ಬ ತನ್ನ ನೆಚ್ಚಿನ ಆಟಗಾರನನ್ನುಹತ್ತಿರದಿಂದ ಕಣ್ತುಂಬಿಸಿಕೊಳ್ಳಲು ಪ್ರಯತ್ನ ನಡೆಸಿದ್ದರು. ಅವರು ರೋಹಿತ್ ಶರ್ಮಾ ಅವರ ಬಳಿ ಬರಲು ಪ್ರಯತ್ನಿಸುತ್ತಿದ್ದ ವೇಳೆ ಭದ್ರತಾ ಸಿಬ್ಬಂದಿ ಆ ಬಾಲಕನನ್ನು ತಡೆದರು. ಈ ವೇಳೆ ರೋಹಿತ್ ಸರ್ ಎಂದು ಬಾಲಕ ಜೋರಾಗಿ ಕೂಗಿದ್ದಾನೆ. ಇದನ್ನು ಕೇಳಿಸಿಕೊಂಡ ರೋಹಿತ್ ಶರ್ಮಾ, ಹೇ……. ಎಂದು ಹೇಳುವ ಮೂಲಕ ಭದ್ರತಾ ಸಿಬ್ಬಂದಿಯನ್ನು ಗದರಿದರು. ನಂತರ ಯುವ ಅಭಿಮಾನಿಯನ್ನು ತಮ್ಮ ಬಳಿಗೆ ಕರೆಸಿಕೊಂಡರು. ಆ ಮೂಲಕ ಹೃದಯವಂತಿಕೆಯನ್ನು ಮೆರೆದರು. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ರೋಹಿತ್ ಶರ್ಮಾ ಅವರ ನಡೆಯನ್ನು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.
ಆಸ್ಟ್ರೇಲಿಯಾ ಏಕದಿನ ಸರಣಿಗೆ ರೋಹಿತ್ ಸಜ್ಜು: ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ರೋಹಿತ್ ಶರ್ಮಾ ಸಜ್ಜಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಶಿವಾಜಿ ಪಾರ್ಕ್ನಲ್ಲಿ ನೆಟ್ ಸೆಷನ್ ಮಾಡಿದ್ದಾರೆ. ಕವರ್ ಡ್ರೈವ್, ಪುಲ್ ಶಾಟ್ ಹಾಗೂ ಸ್ವೀಪ್ ಶಾಟ್ಗಳ ಮೂಲಕ ರೋಹಿತ್ ಶರ್ಮಾ ಅತ್ಯುತ್ತಮ ಫಾರ್ಮ್ನಲ್ಲಿರುವಂತೆ ಕಾಣುತ್ತಿದ್ದಾರೆ. ರೋಹಿತ್ ಶರ್ಮಾ ಅವರನ್ನು ನೋಡಲು ನೂರಾರು ಮಂದಿ ಅಭಿಮಾನಿಗಳು ಮೈದಾನಕ್ಕೆ ಆಗಮಿಸಿದ್ದರು. ಇದರ ಹೊರತಾಗಿಯೂ ರೋಹಿತ್ ಶರ್ಮಾ ಯುವ ಅಭಿಮಾನಿಯನ್ನು ಹತ್ತಿರಕ್ಕೆ ಕರೆಸಿಕೊಂಡಿದ್ದು ಅವರ ಹೃದಯವಂತಿಕೆಯ ನಡೆಯಾಗಿದೆ.
