ಉದಯವಾಹಿನಿ, ಬೆಂಗಳೂರು: RSS ಬಗ್ಗೆ ಖರ್ಗೆಗೆ ಏನೂ ಕಿಸಿಯೋಕೆ ಆಗ್ಲಿಲ್ಲ, ಇನ್ನೂ ಪ್ರಿಯಾಂಕ್ಗೆ ಆಗುತ್ತಾ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ (Congress) ಉರಿಯುತ್ತಿರುವ ಬೆಂಕಿಯ ಮನೆಯಾಗಿದೆ. ಅಲ್ಲಿ ದಲಿತರಿಗೆ ಸ್ಥಾನ ಇಲ್ಲ ಅಂದ್ರೆ ಅಂಬೇಡ್ಕರ್ ಅನುಯಾಯಿಗಳು ಕಾಂಗ್ರೆಸ್ನಲ್ಲಿ ಇರಬಾರದು. ಅಂಬೇಡ್ಕರ್ ವಿರುದ್ಧ ಇರುವ ಖರ್ಗೆ ದಲಿತ ನಾಯಕರಲ್ಲ. ಖರ್ಗೆ ಕುಟುಂಬ ಅಂಬೇಡ್ಕರ್ ವಿಚಾರಗಳಿಂದ ದೂರವಿದ್ದು, ತಾಲಿಬಾನಿಯರನ್ನು ಬೆಂಬಲಿಸುತ್ತಾರೆ. ಗಾಂಧಿ ಕುಟುಂಬದ ಚೇಲಾ ಪ್ರಿಯಾಂಕ್ ಖರ್ಗೆ. ಅವರ ತಂದೆ, ಇಂದಿರಾ ಗಾಂಧಿ, ನೆಹರೂ ಅವರಿಗೂ ಸಂಘದ ಬಗ್ಗೆ ಏನೂ ಕಿಸಿಯಲು ಆಗಿಲ್ಲ. ಇನ್ನೂ ಪ್ರಿಯಾಂಕ್ ಖರ್ಗೆಗೆ ಏನು ಕಿಸಿಯಲು ಆಗುತ್ತೆ? ಬಿಜೆಪಿ ಬಗ್ಗೆ, ಆರ್ಎಸ್ಎಸ್ ಬಗ್ಗೆ ಮಾತಾಡುವಷ್ಟು ಪ್ರಿಯಾಂಕ್ ಖರ್ಗೆ ಪರಿಪಕ್ವ ಆಗಿಲ್ಲ. ಯಾವ ಶಾಖೆ ಬಂದ್ ಮಾಡ್ತಾರೋ ನೋಡೋಣ. ಮುಂದೆ ನಮ್ಮ ಸರ್ಕಾರ ಬಂದಾಗ ಬಡ್ಡಿ ಸಮೇತ ನೋಡಿಕೊಳ್ತೇವೆ. ಅಕ್ರಮ ಮಸೀದಿಗಳನ್ನು ಮೊದಲು ತೆಗೆದು ಹಾಕಿ ನಂತರ ಆರ್ಎಸ್ಎಸ್ ಬಗ್ಗೆ ಮಾತಾಡಲಿ. ಇನ್ನೆರಡು ವರ್ಷ ಹಾರಾಡಿಕೊಳ್ಳಲಿ, ಮುಂದೆ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಎಂದು ಆಕ್ರೋಶ ಹೊರಹಾಕಿದ್ದಾರೆ.
