ಉದಯವಾಹಿನಿ, ಟಾಲಿವುಡ್ ನಟ ವಿಜಯ್ ದೇವರಕೊಂಡ ಹೊಸ ಸಿನಿಮಾ ಸೆಟ್ಟೇರಿದೆ. ಹೈದರಾಬಾದ್‌ನಲ್ಲಿ ಮುಹೂರ್ತ ನೆರವೇರಿದ್ದು, ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಚಿತ್ರಕ್ಕೆ ಕ್ಲಾಪ್ ಮಾಡಿದರು. ನಿರ್ಮಾಪಕ ನಿರಂಜನ್ ರೆಡ್ಡಿ ಕ್ಯಾಮೆರಾ ಆನ್ ಮಾಡಿದರು ಮತ್ತು ನಿರ್ದೇಶಕ ಹನು ರಾಘವಪುಡಿ ಮೊದಲ ದೃಶ್ಯವನ್ನು ನಿರ್ದೇಶಿಸಿದರು. ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಯಶಸ್ವಿ ನಿರ್ಮಾಪಕರಾದ ದಿಲ್ ರಾಜು ಮತ್ತು ಶಿರೀಶ್ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. `ರಾಜಾ ವಾರು ರಾಣಿ ಗಾರು’ ಚಿತ್ರದ ಮೂಲಕ ಖ್ಯಾತಿ ಪಡೆದ ಪ್ರತಿಭಾನ್ವಿತ ನಿರ್ದೇಶಕ ರವಿಕಿರಣ್ ಕೋಲಾ ಈ ಪ್ರಾಜೆಕಟ್‌ಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.
ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಮೂಡಿ ಬರುತ್ತಿರುವ 59ನೇ ಚಿತ್ರ ಇದಾಗಿದೆ. ವಿಜಯ್ ದೇವರಕೊಂಡಗೆ ಜೋಡಿಯಾಗಿ ಮಹಾನಟಿ ಖ್ಯಾತಿಯ ಕೀರ್ತಿ ಸುರೇಶ್ ಸಾಥ್ ಕೊಡಲಿದ್ದಾರೆ.
ಗ್ರಾಮೀಣ ಆಕ್ಷನ್ ಡ್ರಾಮಾ ಹಿನ್ನೆಲೆಯಲ್ಲಿ ಸಿನಿಮಾ ಮೂಡಿ ಬರಲಿದೆ. ಇದೇ ತಿಂಗಳ 16ರಿಂದ ಚಿತ್ರೀಕರಣ ಪ್ರಾರಂಭವಾಗಲಿದ್ದು, ಮುಂದಿನ ವರ್ಷ ಸಿನಿಮಸ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.

Leave a Reply

Your email address will not be published. Required fields are marked *

error: Content is protected !!