ಉದಯವಾಹಿನಿ , ಮಂಡ್ಯ: ದೀಪಾವಳಿ ಕೊಡುಗೆ ಕೊಡುತ್ತಿದ್ದೇವೆ ಎಂದು ಹೇಳಿ ರಾಜ್ಯ ಸರ್ಕಾರ ಬೆಂಗಳೂರು ಜನರ ಕಿಸೆಗೆ ಕೈ ಹಾಕಿದೆ. ಎ-ಖಾತಾ ಸೋಗಿನಲ್ಲಿ 15,000 ಕೋಟಿ ಸುಲಿಗೆ ಮಾಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ನೇರ ಆರೋಪ ಮಾಡಿದರು.
ಮಂಡ್ಯ ನಗರದ ಸಂಜಯ್ ವೃತ್ತದಲ್ಲಿ ಹೊಸದಾಗಿ ನಿರ್ಮಿಸಿರುವ ಸುಸಜ್ಜಿತ ಆಟೋ ನಿಲ್ದಾಣ ಉದ್ಘಾಟಿಸಿದ ಬಳಿಕ ಮಾತನಾಡಿದ ಅವರು, ದೀಪಾವಳಿ ಕೊಡುಗೆ ಎಂದರೆ ಏನೋ ನಮಗೆ ದೊಡ್ಡ ಕೊಡುಗೆ ಕೊಡುತ್ತದೆ ಎಂದು ಜನರು ಭಾವಿಸಿದ್ದರು. ದೊಡ್ಡ ದೊಡ್ಡ ಜಾಹೀರಾತುಗಳನ್ನ ನೋಡಿ ನಾನು ಕೂಡ ಹಾಗೆಯೇ ಅಂದುಕೊಂಡಿದ್ದೆ. ಆದರೆ, ಅದು ದೀಪಾವಳಿ ಹೆಸರಿನಲ್ಲಿ ಜನರಿಗೆ ಮಾಡುತ್ತಿರುವ ಮಹಾನ್ ದೋಖಾ ಎಂದು ಕಿಡಿಕಾರಿದರು.
ಬೆಂಗಳೂರು ನಗರದ ಜನರಿಗೆ ದೀಪಾವಳಿ ಕೊಡುಗೆ ನೀಡೋದಕ್ಕೆ ಬದಲಾಗಿ ಶಾಕ್ ಕೊಡ್ತಿದ್ದಾರೆ. ಅದು ಹೇಗಿದೆ ಎಂದರೆ, ಬಿ ಖಾತಾದಿಂದ ಎ ಖಾತಾಗೆ (A Khata) ಪರಿವರ್ತನೆ ಮಾಡುವ ಅರ್ಜಿಗೆ 500 ರೂಪಾಯಿ ಶುಲ್ಕ ತುಂಬಬೇಕು. ಆ ಶುಲ್ಕದ ಹೆಸರಿನಲ್ಲಿಯೇ ನೂರಾರು ಕೋಟಿ ರೂಪಾಯಿ ಸುಲಿಗೆ ಮಾಡುತ್ತಿದೆ ಈ ಸರ್ಕಾರ. 30/40 ನಿವೇಶನಕ್ಕೆ 4 ರಿಂದ 8 ಲಕ್ಷ ರೂಪಾಯಿವರೆಗೂ ಕಿತ್ತುಕೊಳ್ಳುತ್ತಿದ್ದಾರೆ. ಮೊದಲು 10 ರಿಂದ 13 ಸಾವಿರ ರೂಪಾಯಿ ಅಷ್ಟನ್ನೇ ಕಟ್ಟಬೇಕಿದ್ದ ಬೆಂಗಳೂರು ಜನರು ಇನ್ನು ಮುಂದೆ ಲಕ್ಷಗಳಲ್ಲಿ ಹಣ ಏರಬೇಕಿದೆ. ಎ-ಖಾತಾ ದಂಧೆಯ ಮೂಲಕ ರಾಜ್ಯ ಸರ್ಕಾರ 15,000 ಕೋಟಿ ರೂಪಾಯಿ ವಸೂಲಿ ಮಾಡುತ್ತಿದೆ ಎಂದು ಕೇಂದ್ರ ಸಚಿವರು ಆರೋಪ ಮಾಡಿದರು.

Leave a Reply

Your email address will not be published. Required fields are marked *

error: Content is protected !!