ಉದಯವಾಹಿನಿ, ಪುಣೆ: ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರು ಕುಡಿದು ಕಾರು ಚಲಾಯಿಸಿದ್ದಲ್ಲದೆ, ಆಟೋಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದಲ್ಲಿ ಆರು ಜನರು ಗಾಯಗೊಂಡಿದ್ದಾರೆ. ಮಹಾರಾಷ್ಟ್ರದ ಪುಣೆಯ ರಂಜನ್‌ಗಾಂವ್ ಪ್ರದೇಶದಲ್ಲಿ ಘಟನೆ ನಡೆದಿದೆ. ರಾತ್ರಿ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಹೇಮಂತ್ ಇನಾಮೆ ಎಂದು ಗುರುತಿಸಲಾದ ಕಾನ್‌ಸ್ಟೇಬಲ್ ಕರ್ತವ್ಯದ ನಂತರ ಮನೆಗೆ ಹಿಂತಿರುಗುತ್ತಿದ್ದರು. ಅಪಘಾತದ ಸಿಸಿಟಿವಿ ದೃಶ್ಯಾವಳಿಯ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಕುಡಿದು ಕಾರು ಚಲಾಯಿಸಿದ ಪೊಲೀಸ್ ಪೇದೆಯು ತನ್ನ ವಾಹನವನ್ನು ಪಾದಚಾರಿಗಳು ಮತ್ತು ಎರಡು ಮೋಟಾರ್‌ಸೈಕಲ್‌ಗಳಿಗೆ ಡಿಕ್ಕಿ ಹೊಡೆದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಪೇದೆ ಇನಾವೆ ಸೇರಿದಂತೆ ಆರು ಮಂದಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಡಿತ ಮತ್ತು ಅತಿವೇಗದ ಚಾಲನೆಗಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಅವರ ರಕ್ತದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರತ್ಯಕ್ಷದರ್ಶಿಗಳು ಹೇಳುವಂತೆ ಇನಾಮೆ ಅವರ ಕಾರು ಮೊದಲು ರಸ್ತೆಬದಿಯಲ್ಲಿ ನಡೆಯುತ್ತಿದ್ದ ಪಾದಚಾರಿಗಳಿಗೆ ಡಿಕ್ಕಿ ಹೊಡೆದು ನಂತರ ಎರಡು ಮೋಟಾರ್ ಸೈಕಲ್‌ಗಳಿಗೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲಿದ್ದ ಜನರು ಗಾಯಾಳುಗಳಿಗೆ ಸಹಾಯ ಮಾಡಲು ಧಾವಿಸಿದರು. ಅಪಘಾತದ ಪರಿಣಾಮವಾಗಿ ಆಟೋರಿಕ್ಷಾ ಕೂಡ ಪಲ್ಟಿಯಾಗಿದ್ದು, ರಸ್ತೆಯ ಅವ್ಯವಸ್ಥೆ ಇನ್ನಷ್ಟು ಹೆಚ್ಚಾಯಿತು.

Leave a Reply

Your email address will not be published. Required fields are marked *

error: Content is protected !!