ಉದಯವಾಹಿನಿ, ದುಬೈ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿ ಅಕ್ಟೋಬರ್ 19 ರಂದು ಆರಂಭವಾಗಲಿದೆ. ಟೀಮ್ ಇಂಡಿಯಾ ಈಗಾಗಲೇ ಆಸ್ಟ್ರೇಲಿಯಾದಲ್ಲಿ ಅಭ್ಯಾಸವನ್ನು ನಡೆಸುತ್ತಿದೆ. ವಿಶೇಷವಾಗಿ ದೀರ್ಘಾವಧಿ ಬಳಿಕ ಭಾರತ ತಂಡಕ್ಕೆ ಮರಳಿದ ವಿರಾಟ್ ಕೊಹ್ಲಿ (Virat Kohli) ಮತ್ತು ರೋಹಿತ್ ಶರ್ಮಾ (Rohit Sharma) ಪ್ರಮುಖ ಆಕರ್ಷಣೆಯಾಗಿದೆ. ಪ್ರಸ್ತುತ ಕೊಹ್ಲಿ ಹಾಗೂ ರೋಹಿತ್ ಅವರ ಏಕದಿನ ವಿಶ್ವಕಪ್ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಅದರಂತೆ ಬಿಸಿಸಿಐಥ ಚೀಫ್ ಸೆಲೆಕ್ಟರ್ ಅಜಿತ್ ಅಗರ್ಕರ್ (Ajit Agarkar) ಅವರು, ಪ್ರತಿಯೊಂದು ಪಂದ್ಯದಲ್ಲಿಯೂ ಇವರನ್ನು ಮೌಲ್ಯಮಾಪನ ಮಾಡುವುದು ಮೂರ್ಖತನವಾಗಿದೆ ಎಂದು ಹೇಳಿದ್ದಾರೆ.
ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ದೀರ್ಘ ವಿರಾಮದ ನಂತರ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಮರಳಲು ಸಜ್ಜಾಗಿದ್ದಾರೆ. ಈ ವರ್ಷದ ಆರಂಭದಲ್ಲಿ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತ ಪರ ಕೊನೆಯ ಬಾರಿ ಅವರು ಆಡಿದ್ದರು. ಇದಾದ ಬಳಿಕ 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಸಂದರ್ಭದಲ್ಲಿ ಈ ಇಬ್ಬರೂ ಬ್ಯಾಟ್ಸ್ಮನ್ಗಳು ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದರು. ಈ ಕುರಿತು ಎನ್ಡಿಟಿವಿ ಮಾತನಾಡಿರುವ ಬಿಸಿಸಿಐ ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್, “ಪ್ರತಿಯೊಂದು ಪಂದ್ಯದಲ್ಲಿಯೂ ಅವರ ಪ್ರದರ್ಶನವನ್ನು ಮೌಲ್ಯ ಮಾಪನ ಮಾಡುವುದು ಮೂರ್ಖತನವಾಗುತ್ತದೆ. ಅವರು ಆಡಲು ಪ್ರಾರಂಭಿಸಿದ ನಂತರ, ಅವರನ್ನು ಮೌಲ್ಯಮಾಪನ ಮಾಡಲಾಗುತ್ತದೆ, ಆದರೆ ಅವರನ್ನು ಟ್ರಯಲ್ಗೆ ಒಳಪಡಿಸುವುದಿಲ್ಲ” ಎಂದು ಹೇಳಿದ್ದಾರೆ.
