ಉದಯವಾಹಿನಿ, ಬಾಗಲಕೋಟೆ: ಮುಂದಿನ ಸಿಎಂ ಸತೀಶಣ್ಣನೇ ಆಗ್ಲಿ ಎಂದು ಬಿಜೆಪಿ ಮಾಜಿ ಸಚಿವ ರಾಜು ಗೌಡ ಸಚಿವ ಸತೀಶ್ ಜಾರಕಿಹೊಳಿ ಪರ ಬ್ಯಾಟ್ ಬೀಸಿದ್ದಾರೆ. ಮುಧೋಳ ನಗರದಲ್ಲಿ ವೀರ ಜಡಗಣ್ಣ ಬಾಲಣ್ಣ ಅವರ ಕಂಚಿನ ಪುತ್ಥಳಿ ಅನಾವರಣ ಮಾಡಿ ಅವರು ಮಾತನಾಡಿದರು. ಈ ವೇಳೆ, ಸ್ವತಂತ್ರ ವೀರ ಯೋಧ ಜಡಗಣ್ಣ ಬಾಲಣ್ಣಗೆ ಜಾರಕಿಹೊಳಿಯವರನ್ನು ಹೋಲಿಸಿ, ಹಾಡಿ ಹೊಗಳಿದ್ದಾರೆ. ನಮ್ಮ ಸಮಾಜಕ್ಕೆ ಸತೀಶಣ್ಣ (ಸತೀಶ್ ಜಾರಕಿಹೊಳಿ) ಜಡಗಣ್ಣ ಬಾಲಣ್ಣ ಇದ್ದಂತೆ. ಮಾತು ಕಡಿಮೆ ಆದ್ರೆ ಪ್ಲ್ಯಾನ್ ಹಾಕಿದ್ರೆ ಕರೆಕ್ಟ್ ಏಟು ಹಾಕ್ತಾನೆ ನಮ್ಮಣ್ಣ. ವೀರ ಯೋಧ ಜಡಗಣ್ಣ ಬಾಲಣ್ಣ ಅವ್ರು ಬ್ರಿಟೀಷರ ಎದುರು ಶಸ್ತ್ರತ್ಯಾಗ ಮಾಡಿರಲಿಲ್ಲ. ನೀನು ಶಸ್ತ್ರ ತ್ಯಾಗ ಮಾಡಬೇಡ ಎಂದಿದ್ದಾರೆ.
ಈ ಬಾರಿ ನನಗೆ ಮುಖ್ಯಮಂತ್ರಿ ಆಸೆ ಇಲ್ಲ, ಮುಂದಿನ ಸಾರಿ ಆಗ್ತೇನೆ ಎಂದು ಹೇಳುತ್ತಿದ್ದೀಯ. ಅದೆಲ್ಲ ಬೇಡ ಇದೇ ಡಿಸೆಂಬರ್‍ನಲ್ಲಿ ಮುಖ್ಯಮಂತ್ರಿ ಆಗು. ನಿಮ್ಮನ್ನು ಮುಖ್ಯಮಂತ್ರಿ ಆಗಿ ನೋಡಬೇಕೆಂಬ ಆಸೆ ನಮ್ಮದು. ನಾವು ನಿಮ್ಮ ರಕ್ತವನ್ನೇ ಹಂಚಕೊಂಡು ಹುಟ್ಟೀವಿ, ನಾವೇನು ಹಗುರಿಲ್ಲ ಸುರಪುರ ಬ್ಯಾಡ್ರು. ಹಿಂದೆ ಬ್ರಿಟೀಷರನ್ನೂ ಬಿಟ್ಟಿಲ್ಲ, ಔರಂಗಜೇಬನನ್ನೂ ಬಿಟ್ಟಿಲ್ಲ ಎಂದಿದ್ದಾರೆ.

 

 

Leave a Reply

Your email address will not be published. Required fields are marked *

error: Content is protected !!