ಉದಯವಾಹಿನಿ, ವಿಜಯಪುರ: ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಒಬ್ಬ ಪೊಲೀಸರ ಗುಂಡಿಗೆ ಬಲಿಯಾಗಿದ ಘಟನೆ ಸಿಂದಗಿ ತಾಲೂಕಿನ ರಾಂಪೂರ ಗ್ರಾಮದಲ್ಲಿ ಹೊರ ಭಾಗದಲ್ಲಿ ನಡೆದಿದೆ. ಯುನಸ್ ಪಟೇಲ್ (35) ಎನ್‌ಕೌಂಟರ್‌ಗೆ ಬಲಿಯಾದ ನಟೋರಿಯಸ್‌ ರೌಡಿಯಾಗಿದ್ದಾನೆ. ಈತ ವಿಜಯಪುರ ನಗರದ ಗಾಂಧಿ ಚೌಕ್ ವ್ಯಾಪ್ತಿಯಲ್ಲಿ ಅ.17 ರಂದು ಓರ್ವನಿಗೆ ಚಾಕು ತೋರಿಸಿ 25 ಸಾವಿರ ಹಣ ದರೋಡೆ ಮಾಡಿದ್ದ. ನಂತರ ಆತನ ಸ್ಕೂಟಿಯನ್ನೇ ದರೋಡೆ ಮಾಡಿ ಪರಾರಿಯಾಗಿದ್ದ. ಈ ಸಂಬಂಧ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.  ಆರೋಪಿ ಆಲಮೇಲ ತಾಲೂಕಿನ ದೇವಣಗಾಂವ್ ಗ್ರಾಮದತ್ತ ತೆರಳುತ್ತಿರೋ ಮಾಹಿತಿ ಅರಿತ ಪೊಲೀಸರು ಸೆರೆ ಹಿಡಿಯಲು ತೆರಳಿದ್ದರು. ಸಿಂದಗಿ ತಾಲೂಕಿನ ರಾಂಪುರ್ ಬಳಿ ಆರೋಪಿ ಯುನಸ್‌ನನ್ನು ಬಂಧಿಸಲು ಪೊಲೀಸರು ಮುಂದಾಗಿದ್ದರು. ಈ ವೇಳೆ ಇಬ್ಬರು ಕಾನ್ಸ್‌ಟೇಬಲ್‌ ಹಾಗೂ ಇನ್ಸ್‌ಪೆಕ್ಟರ್‌ ಮೇಲೆ ಆರೋಪಿ ದಾಳಿಗೆ ಯತ್ನಿಸಿದ್ದಾನೆ. ಆಗ ಆಯತಪ್ಪಿ ಇನ್ಸ್‌ಪೆಕ್ಟರ್‌ ಪ್ರದೀಪ್ ತಳಕೇರಿ ಬಿದ್ದಿದ್ದಾರೆ. ಈ ವೇಳೆ ಎಚ್ಚರಿಕೆ ನೀಡಲು ಇನ್ಸ್‌ಪೆಕ್ಟರ್‌ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ ಶರಣಾಗದೇ ಯುನಸ್ ಹಲ್ಲೆಗೆ ಯತ್ನಿಸಿದ್ದಾನೆ.

 

Leave a Reply

Your email address will not be published. Required fields are marked *

error: Content is protected !!