ಉದಯವಾಹಿನಿ, ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿಯ ಚರ್ಚೆ ನಡೀತಿದೆ. ಪವರ್ ಶೇರಿಂಗ್, ಸಂಪುಟ ಪುನಾರಚನೆ ಸೇರಿ ಹಲವಾರು ಮಾತುಗಳು ಕೇಳಿ ಬರುತ್ತಿವೆ. ಈ ನಡುವೆ ತಡರಾತ್ರಿ ಡಿಸಿಎಂ ಡಿಕೆ ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾಗಿದ್ದಾರೆ.
ಸದಾಶಿವನಗರದಲ್ಲಿರುವ ಖರ್ಗೆ ಅವರ ನಿವಾಸದಲ್ಲಿ ತಡರಾತ್ರಿ ಡಿಕೆಶಿ ಭೇಟಿಯಾಗಿದ್ದು, ಸುಮಾರು 1 ಗಂಟೆಗೂ ಹೆಚ್ಚುಕಾಲ ಮಾತುಕತೆ ನಡೆಸಿದ್ದಾರೆ. ಹೀಗಾಗಿ ನವೆಂಬರ್ ಕ್ರಾಂತಿ ಬದಲಿಗೆ ಈ ಶಾಂತಿಯ ಬೆಳವಣಿಗೆ ಹೆಚ್ಚು ಮಹತ್ವ ಪಡೆದುಕೊಂಡಿದೆ.
ಮಾತುಕತೆ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು ಡಿಕೆಶಿಗೆ ಅಭಯ ನೀಡಿದ್ದಾರೆಂದು ತಿಳಿದುಬಂದಿದೆ. ಪಕ್ಷ ನಿಷ್ಠೆ ಹೈಕಮಾಂಡ್ ನಿಷ್ಠೆಗೆ ತಕ್ಕ ಪ್ರತಿಫಲ ಸಿಗಲಿದೆ. ಸೂಕ್ತ ಸಮಯದವರೆಗೆ ತಾಳ್ಮೆಯಿಂದ ಇರಿ ಎಂದು ಸಹಲಗೆ ನೀಡಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.
