ಉದಯವಾಹಿನಿ, ಬೆಂಗಳೂರು: 24 ಗಂಟೆಯಲ್ಲಿ 300 ಮಾವೋವಾದಿಗಳು ಶರಣಾಗಿದ್ದಾರೆ. ಒಂದು ಕಾಲದಲ್ಲಿ ಬಾಂಬ್‌ ಸ್ಫೋಟಿಸಿ ಹತ್ಯೆಗೈಯುತ್ತಿದ್ದ ಸ್ಥಳದಲ್ಲಿ ಈಗ ʻಒಲಿಂಪಿಕ್ಸ್‌ ಕ್ರೀಡಾಕೂಟʼದ ತಯಾರಿ ನಡೆಯುತ್ತಿದೆ. ಇದು ಅತಿದೊಡ್ಡ ಬೆಳವಣಿಗೆ ಎಂದು ಪ್ರಧಾನಿ ನರೇಂದ್ರ ಮೋದಿ ನಕ್ಸಲರ ಶರಣಾಗತಿ ಬಗ್ಗೆ ಹೇಳಿದರು.
ಖಾಸಗಿ ಸುದ್ದಿವಾಹಿನಿಯ ಜಾಗತಿಕ ಶೃಂಗಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, 24 ಗಂಟೆಗಳಲ್ಲಿ 300 ಮಾವೋವಾದಿಗಳು ಸೇರಿ 75 ಗಂಟೆಗಳಲ್ಲಿ ಒಟ್ಟು 303 ನಕ್ಷಲರು ಶರಣಾಗಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ನಕ್ಸಲ್‌ ಕಾರ್ಯಾಚರಣೆ ವಿರುದ್ಧ ತಮ್ಮ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿದರು.

ಇದೇ ಮೊದಲು ನನ್ನ ನೋವು ಹೇಳಿಕೊಳ್ತಿದ್ದೇನೆ: ಮಾವೋವಾದಿಗಳು ಕಳೆದ 50-55 ವರ್ಷಗಳಲ್ಲಿ ಸಾವಿರಾರು ಜನರನ್ನ ಕೊಂದಿದ್ದಾರೆ. ಅಲ್ಲದೇ ಶಾಲೆಗಳನ್ನಾಗಲಿ, ಆಸ್ಪತ್ರೆಗಳನ್ನಾಗಲಿ ನಿರ್ಮಿಸಲು ಬಿಡಲಿಲ್ಲ. ವೈದ್ಯರನ್ನ ಚಿಕಿತ್ಸಾಲಯಗಳಿಗೆ ಹೋಗದಂತೆ ತಡೆದರು. ಹಲವು ಸಂಸ್ಥೆಗಳ ಮೇಲೆ ದಾಳಿ ಮಾಡ್ತಿದ್ದರು. ಮಾವೋವಾದಿಗಳ ಭಯೋತ್ಪಾದನೆಯಿಂದ ಯುವಜನರಿಗೆ ಅನ್ಯಾಯವಾಗಿತ್ತು. ಇದೆಲ್ಲದರಿಂದ ನಾನು ಬಹಳ ಕೋಪಗೊಂಡಿದ್ದೆ ಎನ್ನುತ್ತಾ. ಇದೇ ಮೊದಲಬಾರಿಗೆ ಜಗತ್ತಿನ ಮುಂದೆ ನನ್ನ ನೋವನ್ನ ಹೇಳಿಕೊಳ್ಳುತ್ತಿದ್ದೇನೆ ಎಂದು ಭಾವುಕರಾದರು.

303 ಮಂದಿ ಶರಣಾಗತಿ: ನಮ್ಮ ಸರ್ಕಾರ ಅನ್ಯಾಯಕ್ಕೆ ಒಳಗಾದ ಹಾಗೂ ದಾರಿ ತಪ್ಪಿದ ಯುವಜನರನ್ನ ತಲುಪಿ, ಮತ್ತೆ ಅವರನ್ನ ಮುಖ್ಯವಾಹಿನಿಗೆ ತರಲು ವಿಶೇಷ ಪ್ರಯತ್ನಗಳನ್ನ ನಡೆಸಿದೆ. ಇಡೀ ದೇಶ ಇಂದು ಈ ಪ್ರಯತ್ನಗಳ ಫಲಿತಾಂಶ ನೋಡುತ್ತಿದೆ. ಈಗ 303 ನಕ್ಸಲರು ಶರಣಾಗಿದ್ದಾರೆ. ಛತ್ತೀಸ್‌ಗಢದಲ್ಲಿ ಗುರುವಾರ ಒಂದೇ ದಿನ 170 ನಕ್ಸಲರು ಶರಣಾಗಿದ್ದಾರೆ. ಇವರು ಸಾಮಾನ್ಯ ಜನರಾಗಿರಲಿಲ್ಲ. ಇವರ ತಲೆಗೆ ಬಹುಮಾನ ನಿಗದಿ ಮಾಡಲಾಗಿತ್ತು. ಈಗ ಅವರೇ ಮುಕ್ತವಾಗಿ ಶರಣಾಗಿದ್ದು, ಅವರಿಂದ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳನ್ನ ವಶಪಡಿಸಿಕೊಳ್ಳಲಾಗಿದೆ ಎಂದು ವಿವರಿಸಿದರು.

Leave a Reply

Your email address will not be published. Required fields are marked *

error: Content is protected !!