ಉದಯವಾಹಿನಿ, ಇಸ್ಲಾಮಾಬಾದ್: ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಸಂಘರ್ಷ ಮತ್ತೆ ಮುಂದುವರಿದಿದೆ. ಕದನ ವಿರಾಮ ಉಲ್ಲಂಘಿಸಿ ಪಾಕ್‌ ವಾಯುದಾಳಿ ನಡೆಸಿದ ಬಳಿಕ ಅಫ್ಘಾನಿಸ್ತಾನ ಪ್ರತಿದಾಳಿಗೆ ಮುಂದಾಗಿದೆ. ತಡರಾತ್ರಿ ಪಾಕ್‌ ನಡೆಸಿದ ವೈಮಾನಿಕ ದಾಳಿಯಲ್ಲಿ ಅಫ್ಘಾನ್‌ನ 10 ಮಂದಿ ಮೃತಪಟ್ಟಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆಯೇ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಪಾಕ್‌ನಲ್ಲಿರುವ ಆಫ್ಘನ್ನರು ದೇಶ ತೊರೆಯುವಂತೆ ಎಚ್ಚರಿಕೆ ನೀಡಿದ್ದಾರೆ.
ಅಫ್ಘಾನಿಸ್ತಾನ ಸರ್ಕಾರ ನೆರೆಹೊರೆಯವರೊಂದಿಗೆ ಇದ್ದ ಹಳೆಯ ಸಂಬಂಧಗಳನ್ನ ಕಳೆದುಕೊಂಡಿದೆ. ಇಲ್ಲಿನ ದೇಶದ ಸಂಪನ್ಮೂಲಗಳು 2.50 ಕೋಟಿ ಪಾಕಿಸ್ತಾನಿಯರಿಗೆ ಸೇರಿದ್ದೇ ಹೊರತು, ಆಫ್ಘನ್ನರಿಗೆ ಅಲ್ಲ. ಹಾಗಾಗಿ ಕೂಡಲೇ ಆಫ್ಘನ್ನರು ಪಾಕ್‌ ತೊರೆದು ತಾಯ್ನಾಡಿಗೆ ಮರಳಬೇಕು. ಈಗ ಅಲ್ಲಿ ತಮ್ಮದೇ ಸರ್ಕಾರವನ್ನ ಅವರು ಹೊಂದಿದ್ದಾರೆ ಎಂದು ಹೇಳಿದ್ದಾರೆ.
ಪಾಕಿಸ್ತಾನ ಹಲವು ವರ್ಷಗಳಿಂದ ತಾಳ್ಮೆ ವಹಿಸುತ್ತಲೇ ಬಂದಿದೆ. ಗಡಿಯಾಚೆಗಿನ ಭಯೋತ್ಪಾದನಾ ಘಟನೆಗಳ ಕುರಿತು 836 ಪ್ರತಿಭಟನಾ ಟಿಪ್ಪಣಿಗಳನ್ನ ಕಳಿಸಿದೆ. ಆದ್ರೆ ಅಫ್ಘಾನ್‌ನಿಂದ ಯಾವುದೇ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ. ಹಾಗಾಗಿ ಇನ್ಮುಂದೆ ನಮ್ಮ ಮನವಿಗಳು ಶಾಂತಿಯುತವಾಗಿರಲ್ಲ. ಪಾಕಿಸ್ತಾನದ ಯಾವುದೇ ನಿಯೋಗಗಳೂ ಕಾಬೂಲ್‌ಗೆ ಹೋಗಲ್ಲ. ಭಯೋತ್ಪಾದನೆಯ ಮೂಲ ಎಲ್ಲಿದ್ದರೂ, ಅದು ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಉಗ್ರಕೃತ್ಯಗಳಿಗೆ ಬೆಂಬಲ ನೀಡುವ ಪಾಕ್‌ ಹೇಳಿಕೊಂಡಿದೆ.

Leave a Reply

Your email address will not be published. Required fields are marked *

error: Content is protected !!