ಉದಯವಾಹಿನಿ, ಬೆಂಗಳೂರು: ಪರಿಸರ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಮನೆಗೆ ಬೀಗ ಜಡಿದ ಪ್ರಕರಣ ಮಾಸುವ ಮುನ್ನವೇ ಬಿಗ್‌ಬಾಸ್‌ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲಾಗಿದೆ. ಬಿಗ್ ಬಾಸ್ ಮನೆಯಲ್ಲಿ S ಪದ ಬಳಕೆ ಮಾಡಿದಕ್ಕೆ ಅಶ್ವಿನಿಗೌಡ ಮತ್ತು ಆಯೋಜಕರ ವಿರುದ್ಧ ಹೈಕೋರ್ಟ್ ವಕೀಲ ಪ್ರಶಾಂತ್ ಮೆತಾಲ್ ಬಿಡದಿ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸಹ ಸ್ಪರ್ಧಿ ರಕ್ಷಿತಾ ಕುರಿತು ಈ ಮಾತನ್ನು ಆಡಿದ್ದಾರೆ. ಇದೊಂದು ವ್ಯಕ್ತಿತ್ವ ನಿಂದನೆ ಎಂದು ಆರೋಪಿಸಿ ಅಶ್ವಿನಿಗೌಡ, ಕಲರ್ಸ್ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್ , ಕ್ಲಸ್ಟರ್ ಹೆಡ್ ಸುಷ್ಮಾ ಮತ್ತು ಡೈರೆಕ್ಟರ್ ಪ್ರಕಾಶ್ ವಿರುದ್ಧ ದೂರು ನೀಡಿದ್ದರು. ಬಿಡದಿ ಪೊಲೀಸರು ದೂರು ಸ್ವೀಕರಿಸಿ ಎನ್‌ಸಿಆರ್ (ಗಂಭೀರವಲ್ಲದ ಪ್ರಕರಣ) ದಾಖಲಿಸಿದ್ದಾರೆ. ದೂರಿನಲ್ಲಿ ಏನಿದೆ?
ಬಿಗ್‌ಬಾಸ್ 12 ಕಾರ್ಯಕ್ರಮದಲ್ಲಿ ಕಂಟೆಸ್ಟೆಂಟ್ ರಕ್ಷಿತ ರವರಿಗೆ ‘She is S, ಆ Category ನ ಎಂದು ಸ್ಪರ್ಧಿಯಾದ ಅಶ್ವಿನಿ ಗೌಡ ಅವರು ಪದ ಬಳಕೆಯನ್ನು ಮಾಡಿರುತ್ತಾರೆ.
ಇದು ಜಾತಿ ನಿಂದನೆ ಮತ್ತು ವ್ಯಕ್ತಿತ್ವದ ನಿಂದನೆ ಮಾಡುವಂತಹ ವಿಷಯ. ಈ ಸಮಾಜದಲ್ಲಿ ಎಲ್ಲರೂ ಒಂದೇ ಯಾವ ಜಾತಿ ಅಥವಾ ಭೇದವನ್ನು ಹರಡುವಂತಿಲ್ಲ. ಅಶ್ವಿನಿ ಗೌಡ ಹೇಳಿದ ಮಾತನ್ನು ತೆಗೆಯದೇ ತಮ್ಮ ಟಿಆರ್‌ಪಿ ಹೆಚ್ಚಾಗಲು ಇದನ್ನು ಪ್ರಸಾರ ಮಾಡಿರುತ್ತಾರೆ. ಇದರಿಂದ ಸಮಾಜಕ್ಕೆ ಒಂದು ಕೆಟ್ಟ ಸಂದೇಶವನ್ನು ಕಳುಹಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!