ಉದಯವಾಹಿನಿ, ಮೈಸೂರು: ತಿ.ನರಸೀಪುರ ತಾಲೂಕಿನ ಬನ್ನೂರು ಹೈವೇ ಬಳಿಯ ಭ್ರೂಣ ಪರೀಕ್ಷೆ ಕೇಂದ್ರದ ಪ್ರಕರಣದಲ್ಲಿ ಕಿಂಗ್ ಪಿನ್ ಶ್ಯಾಮಲಾ ಓದಿದ್ದು ಬಿಎಸ್ಸಿ ನರ್ಸಿಂಗ್. ಓದು ಮುಗಿಸಿದ ಕೂಡಲೇ ಈಕೆ ನರ್ಸಿಂಗ್ ಹೋಂ ಆರಂಭಿಸಿದ್ದಳು ಎಂದು ತಿಳಿದುಬಂದಿದೆ. ಬನ್ನೂರು ಮುಖ್ಯ ರಸ್ತೆಯಲ್ಲಿ 15 ಬೆಡ್‌ಗಳ ಆಸ್ಪತ್ರೆ ಆರಂಭಿಸಿ ಅಲ್ಲಿ ಭ್ರೂಣ ಪರೀಕ್ಷೆ ದಂಧೆ ನಡೆಸುತ್ತಿದ್ದಳು. ಇದುವರೆಗೂ‌ ಸುಮಾರು 200ಕ್ಕೂ ಹೆಚ್ಚು ಭ್ರೂಣ ಪರೀಕ್ಷೆ ಈ ಆಸ್ಪತ್ರೆಯಲ್ಲಿ ನಡೆದಿದೆ ಎಂಬ ಅಂಶ ತನಿಖೆಯಲ್ಲಿ ಬಹಿರಂಗವಾಗಿದೆ. ಶ್ಯಾಮಲಾ ತಮ್ಮ ಗೋವಿಂದರಾಜು ಕೂಡ ಕೃತ್ಯದಲ್ಲಿ ಭಾಗಿಯಾಗಿದ್ದ. ಏಜೆಂಟ್ ಪುಟ್ಟರಾಜು ಮೂಲಕ ಗಿರಾಕಿಗಳನ್ನು ಸ್ಕ್ಯಾನಿಂಗ್ ಕೇಂದ್ರಕ್ಕೆ ಕರೆಸುತ್ತಿದ್ದ ಎಂದು ತಿಳಿದು ಬಂದಿದೆ.
ಪ್ರಕರಣ ಸಂಬಂಧ ಸಾಲಿಗ್ರಾಮ ತಾಲೂಕಿನ ಬೇರ್ಯ ಮೂಲದ ಶಿವಕುಮಾರ್, ಮೈಸೂರು ತಾಲೂಕಿನ ಡಿ.ಸಾಲುಂಡಿ ಗ್ರಾಮದ ಹರೀಶ್ ವಶಕ್ಕೆ ಪಡೆಯಲಾಗಿದೆ. ಮಧ್ಯವರ್ತಿ ಪುಟ್ಟರಾಜು ಎಸ್ಕೇಪ್ ಆಗಿದ್ದಾನೆ. ಒಟ್ಟು ಐವರನ್ನು ಬಂಧಿಸಲಾಗಿದೆ. ಆರೋಪಿಗಳು ಒಂದು ಭ್ರೂಣಪತ್ತೆಗೆ 25 ರಿಂದ 35 ಸಾವಿರ ಚಾರ್ಜ್ ಮಾಡುತ್ತಿದ್ದರು. ಆಸ್ಪತ್ರೆಯಿಂದ ಕಾರಿನಲ್ಲಿ ಸ್ಕ್ಯಾನಿಂಗ್ ಮಿಷಿನ್ ತಂದು ಭ್ರೂಣ ಪತ್ತೆ ಮಾಡಲಾಗುತ್ತಿತ್ತು. ಶ್ಯಾಮಲಾ ಮನೆಯಲ್ಲಿಯೇ ಸ್ಕ್ಯಾನಿಂಗ್ ಮಿಷಿನ್ ಕೂಡ ಇತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!