ಉದಯವಾಹಿನಿ, ಭೋಪಾಲ್‌ : ಮಧ್ಯಪ್ರದೇಶದ ) ಕಟ್ನಿ ಜಿಲ್ಲೆಯ ಕೈಮೋರ್ ರೆಸ್ಟ್ ಹೌಸ್ ಮುಂದೆ ಸೋಮವಾರ ಬೆಳಿಗ್ಗೆ ಇಬ್ಬರು ದುಷ್ಕರ್ಮಿಗಳು ಬಿಜೆಪಿ ಮುಖಂಡ ನಿಲೇಶ್ ರಾಜಕ್ ಎಂಬವರನ್ನು ಗುಂಡಿಕ್ಕಿ ಕೊಂದಿದ್ದಾರೆ. ಇದಾದ ನಂತರ ಆರೋಪಿಗಳಲ್ಲಿ ಒಬ್ಬನ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಿಲೇಶ್ ರಜಕ್ ಎಂಬ ವ್ಯಕ್ತಿಯನ್ನು ಇಬ್ಬರು ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ವಿಶ್ವಕರ್ಮ ತಿಳಿಸಿದ್ದಾರೆ.
“ಕೈಮೋರ್ ಪೊಲೀಸ್ ಠಾಣೆ ಪ್ರದೇಶದಲ್ಲಿ, ಕೈಮೋರ್ ರೆಸ್ಟ್ ಹೌಸ್ ಮುಂದೆ ಇಂದು ದುರಂತ ಘಟನೆ ಸಂಭವಿಸಿದೆ, ನಿಲೇಶ್ ರಾಜಕ್ ಅವರನ್ನು ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ. ಪೊಲೀಸರು ಕೂಡಲೇ ಪ್ರಕರಣ ದಾಖಲಿಸಿಕೊಂಡಿದ್ದು, ಶಂಕಿತರನ್ನು ಗುರುತಿಸಿ ಬಂಧಿಸಲು ಸಕ್ರಿಯವಾಗಿ ಕೆಲಸ ಮಾಡುತ್ತಿದ್ದಾರೆ. ಶಂಕಿತರನ್ನು ಗುರುತಿಸಲಾಗಿದೆ ಮತ್ತು ಅವರನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ. ಅವರನ್ನು ಶೀಘ್ರದಲ್ಲೇ ವಶಕ್ಕೆ ಪಡೆಯಲಾಗುವುದು ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಅವರು ಹೇಳಿದರು.
ಘಟನೆ ನಡೆದ ತುಸು ಸಮಯದ ಬಳಿಕ, ಆರೋಪಿಗಳಲ್ಲಿ ಒಬ್ಬ ಎಂದು ಗುರುತಿಸಲ್ಪಟ್ಟವನ ತಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಎಸ್ಪಿ ವಿಶ್ವಕರ್ಮ ತಿಳಿಸಿದ್ದಾರೆ. ಆರೋಪಿಯ ತಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ದೇಹ ಮುಂದಿನ ಕಾನೂನು ಪ್ರಕ್ರಿಯೆಗೆ ಒಳಗಾಗುತ್ತಿದೆ ಎಂದು ಅವರು ಹೇಳಿದರು. ಆರೋಪಿಗಳನ್ನು ಪ್ರಿನ್ಸ್ (30) ಮತ್ತು 33 ವರ್ಷದ ಅಕ್ರಮ್ ಖಾನ್ ಎಂದು ಗುರುತಿಸಲಾಗಿದೆ. ಪ್ರಿನ್ಸ್ ತಂದೆ ನೆಲ್ಸನ್ ಜೋಸೆಫ್, ತಮ್ಮ ಮಗ ಕೊಲೆಯಲ್ಲಿ ಭಾಗಿಯಾಗಿದ್ದಾನೆಂದು ತಿಳಿದ ನಂತರ ಆತ್ಮಹತ್ಯೆ ಮಾಡಿಕೊಂಡರು.

Leave a Reply

Your email address will not be published. Required fields are marked *

error: Content is protected !!