ಉದಯವಾಹಿನಿ, ಜೈಪುರ: ರಾಜಸ್ಥಾನದಲ್ಲಿ ಚಲಿಸುವ ರೈಲಿನಲ್ಲಿ ಸೈನಿಕನ ಹತ್ಯೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಒತ್ತಾಯಿಸಿದೆ. ಆರೋಪಿ ರೈಲ್ವೆ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸೈನಿಕನ ಕುಟುಂಬಕ್ಕೆ ನ್ಯಾಯ ಮತ್ತು ಪರಿಹಾರವನ್ನು ಒದಗಿಸುವುದಾಗಿ ಮಾನವ ಹಕ್ಕುಗಳ ಸಂಸ್ಥೆ ಪ್ರತಿಜ್ಞೆ ಮಾಡಿದೆ. ಕಂಬಳಿ ಮತ್ತು ಹಾಸಿಗೆಯ ವಿಚಾರದಲ್ಲಿ ನಡೆದ ಜಗಳದಲ್ಲಿ ಸೈನಿಕನನ್ನು ರೈಲ್ವೆ ಸಿಬ್ಬಂದಿಯಾಗಿದ್ದ ಕೋಚ್ ಅಟೆಂಡೆಂಟ್ ಹತ್ಯೆ ಮಾಡಿದ್ದಾನೆ ಎಂದು ರೈಲ್ವೆ ಇಲಾಖೆ ತಿಳಿಸಿದೆ.
ಭಾರತೀಯ ಸೇನಾ ಸಿಬ್ಬಂದಿ ಜಿಗರ್ ಚೌಧರಿ ಕೆಲವು ದಿನಗಳ ರಜೆ ತೆಗೆದುಕೊಂಡು ಗುಜರಾತ್‌ನ ಸಬರಮತಿಯಲ್ಲಿರುವ ತಮ್ಮ ಮನೆಗೆ ಪ್ರಯಾಣಿಸುತ್ತಿದ್ದರು. ನ.2 ರ ರಾತ್ರಿ, ಅವರು ಪಂಜಾಬ್‌ನ ಫಿರೋಜ್‌ಪುರ ನಿಲ್ದಾಣದಿಂದ 19224 ರ ಜಮ್ಮು ತಾವಿ – ಸಬರಮತಿ ಎಕ್ಸ್‌ಪ್ರೆಸ್‌ನ ಸ್ಲೀಪರ್ ಕೋಚ್ ಅನ್ನು ಹತ್ತಿದರು. ಪ್ರಯಾಣದ ಸಮಯದಲ್ಲಿ, ಅವರು B4 AC ಕೋಚ್‌ನ ಸಹಾಯಕರಿಂದ ಬ್ಲಾಂಕೆಟ್‌, ಬೆಡ್‌ಶೀಟ್‌ ಕೇಳಿದ್ದರು.

Leave a Reply

Your email address will not be published. Required fields are marked *

error: Content is protected !!