ಉದಯವಾಹಿನಿ, ಡೇಟನ್: ಓಹಿಯೋದಲ್ಲಿ ಭಾನುವಾರ ನಡೆದ ‘ಡೇಟನ್ ಸಾಹಿತ್ಯ ಶಾಂತಿ ಪ್ರಶಸ್ತಿ ಸಮಾರಂಭ’ದಲ್ಲಿ ಭಾರತೀಯ ಸಂಜಾತ, ಲೇಖಕ ಸಲ್ಮಾನ್ ರಶಿ ಅವರಿಗೆ ‘ಜೀವಮಾನ ಸಾಧನೆ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.ಮೂರು ವರ್ಷಗಳ ಹಿಂದೆ ನ್ಯೂಯಾರ್ಕ್ ನಗರದಲ್ಲಿ ನಡೆದಿದ್ದ ಉಪನ್ಯಾಸ ಕಾರ್ಯಕ್ರಮದ ವೇದಿಕೆಯಲ್ಲಿ ರಶಿ ಅವರ ಮೇಲೆ ವ್ಯಕ್ತಿಯೊಬ್ಬ ಚಾಕುವಿನಿಂದ ದಾಳಿ ನಡೆಸಿದ್ದ. ಈ ವೇಳೆ ರಶಿ ಬಲಗಣ್ಣನ್ನು ಕಳೆದುಕೊಂಡಿದ್ದರು. ಈ ಘಟನೆ ಬಳಿಕ ಅವರು ಕಾದಂಬರಿಯನ್ನು ಪ್ರಕಟಿಸಿದ ನಂತರ ‘ಜೀವಮಾನ ಸಾಧನೆ ಪ್ರಶಸ್ತಿ’ಯನ್ನು ಸ್ವೀಕರಿಸಿದ್ದಾರೆ.
ಸೃಜನಶೀಲ, ಸೃಜನೇತರ ಸಾಹಿತ್ಯ ಹಾಗೂ ಜೀವಮಾನದ ಸಾಧನೆಗಾಗಿ ಪ್ರತ್ಯೇಕ ಪ್ರಶಸ್ತಿಗಳನ್ನು ಪ್ರತಿ ವರ್ಷ ನೀಡಲಾಗುತ್ತದೆ. ಸಾಹಿತ್ಯಕ ಅರ್ಹತೆ ಹೊಂದಿದ ಮತ್ತು ತಮ್ಮ ಕೆಲಸದ ಮೂಲಕ ಶಾಂತಿಯನ್ನು ಉತ್ತೇಜಿಸುವ ಬರಹಗಾರರಿಗೆ ಈ ಪ್ರಶಸ್ತಿಗಳನ್ನು ನೀಡಲಾಗುತ್ತದೆ.

Leave a Reply

Your email address will not be published. Required fields are marked *

error: Content is protected !!