ಉದಯವಾಹಿನಿ, ಬೆಂಗಳೂರು: ರಾಜ್ಯದ ಆಸ್ಪತ್ರೆಗಳಲ್ಲಿ ಪ್ರಾಣಿ ಕಡಿತಕ್ಕೆ ಮುಂಗಡ ಹಣ ಕೇಳದೇ ತಕ್ಷಣ ಪ್ರಥಮ ಚಿಕಿತ್ಸೆ ನೀಡುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಸುಪ್ರೀಂ ಕೋರ್ಟ್ ಸೂಚನೆ ಬೆನ್ನಲ್ಲೇ ಎಚ್ಚೆತ್ತು ಕರ್ನಾಟಕ ಸರ್ಕಾರ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಸುತ್ತೋಲೆ ಹೊರಡಿಸಿದೆ. ಸುಪ್ರೀಂ ಕೋರ್ಟ್ ಎಚ್ಚರಿಕೆಯ ನಂತರ ಸರ್ಕಾರವು ನಾಯಿ ಹಾವು ಕಡಿತಕ್ಕೆ ಉಚಿತ ತುರ್ತು ಚಿಕಿತ್ಸೆ, ಆ್ಯಂಟಿ-ರೇಬೀಸ್ ಲಸಿಕೆ ಮತ್ತು ಪ್ರಥಮ ಚಿಕಿತ್ಸೆ ನೀಡಲು ಹೊಸ ಸುತ್ತೋಲೆ ಹೊರಡಿಸಿದೆ.
ಕೇವಲ ಬೆಂಗಳೂರು ಮಾತ್ರವಲ್ಲದೆ ಕರ್ನಾಟಕ ಸೇರಿದಂತೆ ಇಡೀ ದೇಶದಲ್ಲೇ ನಾಯಿ, ಹಾವು ಹಾಗೂ ಇತರೆ ಪ್ರಾಣಿಗಳ ಕಡಿತದಿಂದ ಸಾವಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯಗಳಿಗೆ ಈ ಕುರಿತು ಸಮಗ್ರ ವರದಿ ನೀಡುವಂತೆ ಸೂಚನೆ ನೀಡಿತ್ತು.  ಕೆಲವು ರಾಜ್ಯಗಳು ಮಾತ್ರ ಸುಪ್ರೀಂ ಕೋರ್ಟ್ ಗೆ ವರದಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ವರದಿ ಸಲ್ಲಿಸದ ರಾಜ್ಯಗಳಿಗೆ ಇತ್ತೀಚಿಗೆ ಛೀಮಾರಿ ಹಾಕಿತ್ತು. ಸುಪ್ರೀಂ ಕೋರ್ಟ್ ಆದೇಶದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಂಡಿದೆ.

Leave a Reply

Your email address will not be published. Required fields are marked *

error: Content is protected !!