ಉದಯವಾಹಿನಿ,ಆನೇಕಲ್: ಸ್ಕ್ಯಾನಿಂಗ್‌ಗೆ ಬಂದ ಮಹಿಳೆಯ ಖಾಸಗಿ ಅಂಗ ಮುಟ್ಟಿ ಕಿರುಕುಳ ನೀಡಿದ್ದ ರೆಡಿಯಾಲಜಿಸ್ಟ್ ಅನ್ನು ಆನೇಕಲ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಬಂಧಿತ ಆರೋಪಿಯನ್ನು ಜಯಕುಮಾರ್ ಎಂದು ಗುರುತಿಸಲಾಗಿದ್ದು, ಆನೇಕಲ್ ಪಟ್ಟಣದ ಸ್ಕ್ಯಾನಿಂಗ್‌ ಸೆಂಟರ್‌ನಲ್ಲಿ ರೆಡಿಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದ. ಇತ್ತೀಚಿಗೆ ಮಹಿಳೆಯೋರ್ವರು ಹೊಟ್ಟೆ ನೋವೆಂದು ಪತಿಯೊಂದಿಗೆ ಸ್ಕ್ಯಾನಿಂಗ್ ಸೆಂಟರ್‌ಗೆ ತೆರಳಿದ್ದರು. ಈ ವೇಳೆ ಸ್ಕ್ಯಾನಿಂಗ್ ಮಾಡುವಾಗ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದ. ಜೊತೆಗೆ ಖಾಸಗಿ ಅಂಗಕ್ಕೆ ಕೈ ಹಾಕಿ, ಕಾಮಾಂಧ ಡಾಕ್ಟರ್ ವಿಕೃತಿ ಮೆರೆದಿದ್ದ. ಮಹಿಳೆ ವಿರೋಧ ವ್ಯಕ್ತಪಡಿಸಿದಾಗ ಬೆದರಿಕೆ ಹಾಕಿ, ಈ ವಿಚಾರ ಹೊರಗೆ ಬಾಯ್ಬಿಡದಂತೆ ಧಮ್ಕಿ ಹಾಕಿದ್ದ. ಅವಾಚ್ಯ ಶಬ್ದಗಳಿಂದ ನಿಂದಿಸಿ, ಸಾಯಿಸೋದಾಗಿ ಬೆದರಿಕೆ ಹಾಕಿದ್ದ.
ಈ ಘಟನೆಯನ್ನು ಮಹಿಳೆ ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿಕೊಂಡು, ಕೂಡಲೇ ಆನೇಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ದಾಖಲಾಗುತ್ತಿದ್ದಂತೆ ಆನೇಕಲ್ ಪೊಲೀಸರು ಆರೋಪಿಯನ್ನು ಠಾಣೆಗೆ ಕರೆಸಿ ಬಿಟ್ಟು ಕಳುಹಿಸಿದ್ದರು.ಈ ಸಂಬಂಧ ಕರವೇ ರಾಜ್ಯ ಉಪಾಧ್ಯಕ್ಷ ಲೋಕೇಶ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಆನೇಕಲ್ ಇನ್ಸ್‌ಪೆಕ್ಟರ್‌ ತಿಪ್ಪೇಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆ ನಡೆದು ಹತ್ತು ದಿನ ಕಳೆದರೂ ಆರೋಪಿಯನ್ನು ಬಂಧನ ಮಾಡಿಲ್ಲ. ಈ ಕೂಡಲೇ ಆರೋಪಿಯನ್ನು ಬಂಧಿಸಬೇಕು. ಇಲ್ಲವಾದರೆ ಆನೇಕಲ್ ಪಟ್ಟಣ ಬಂದ್ ಮಾಡುವ ಎಚ್ಚರಿಕೆ ನೀಡಿದ್ದರು. ಹೋರಾಟಕ್ಕೆ ಮಣಿದ ಪೊಲೀಸರು ಆರೋಪಿ ಜಯಕುಮಾರ್‌ನನ್ನು ಅರೆಸ್ಟ್ ಮಾಡಿದ್ದಾರೆ

Leave a Reply

Your email address will not be published. Required fields are marked *

error: Content is protected !!