ಉದಯವಾಹಿನಿ, ಬೆಂಗಳೂರು: ನಗರದಲ್ಲಿ ಹಾಡಹಗಲೇ ನಡೆದ 7 ಕೋಟಿ 11 ಲಕ್ಷ ರೂ. ದರೋಡೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ದರೋಡೆಕೋರರು ಪೊಲೀಸರ ಕಣ್ತಪ್ಪಿಸಲು ಹಲವು ರೀತಿಯ ಮಾಸ್ಟರ್ ಪ್ಲ್ಯಾನ್‌ ಮಾಡಿರುವುದು ತನಿಖೆ ವೇಳೆ ಗೊತ್ತಾಗಿದೆ. ದರೋಡೆಕೊರರು ಎಲ್ಲಿಯೂ ಫೋನ್‌ ಮೂಲಕ ನಾರ್ಮಲ್ ಕಾಲ್‌ನಲ್ಲಿ ಮಾತನಾಡದೇ ವಾಟ್ಸಪ್‌ ಕಾಲ್‌ಗಳಲ್ಲಿ ಮಾತ್ರ ಮಾತನಾಡಿರುವುದು ತಿಳಿದು ಬಂದಿದೆ. ನಾರ್ಮಲ್ ಕಾಲ್ ಮಾತನಾಡಿದರೆ ಸುಲಭವಾಗಿ ಪೊಲೀಸರು ಪತ್ತೆ ಮಾಡ್ತಾರೆ ಅನ್ನೋ ಕಾರಣಕ್ಕೆ ಕಿರಾತಕರು ವಾಟ್ಸಪ್ ಕಾಲ್‌ಗಳಲ್ಲಿ ಮಾತ್ರ ಮಾತನಾಡಿರುವುದು ಕಂಡು ಬಂದಿದೆ. ಇದೇ ಕಾರಣಕ್ಕೆ ಪೊಲೀಸರಿಗೆ ಆರಂಭದಲ್ಲಿ ದರೋಡೆಕೋರರು ಬೆಂಗಳೂರಿನಿಂದ ಹೊರಗಡೆ ಹೋಗಿದ್ದಾರಾ ಅಥವಾ ಬೆಂಗಳೂರಿನಲ್ಲೇ ಇದ್ದಾರಾ ಅನ್ನೋದು ಗೊಂದಲವಾಗಿದೆ.

ವಾಟ್ಸಪ್ ಕಾಲ್ ಬಳಕೆ ಮಾಡಿರೋದು ಖಾತರಿಯಾಗುತ್ತಿದ್ದಂತೆ ಪೊಲೀಸರು ಸಿಸಿಟಿವಿಗಳ ಮೊರೆ ಹೋಗಿದ್ದಾರೆ. ಸಿಸಿಟಿವಿ ದೃಶ್ಯಗಳನ್ನು ಪರಿಶೀಲನೆ ಮಾಡಿ ನೋಡಿದಾಗ ದರೋಡೆಕೊರರ ಗ್ಯಾಂಗ್ ಬೆಂಗಳೂರು ದಾಟಿ ಹೋಗಿದ್ದಾರೆ ಅನ್ನೋದು ಪಕ್ಕ ಆಗಿದೆ. ದರೋಡೆಕೋರರ ಪತ್ತೆಗೆ ಆಂದ್ರಪ್ರದೇಶ ಹಾಗೂ ತಮಿಳುನಾಡಿಗೆ ಎರಡು ತಂಡ ಹೊದರೆ, ಬೆಂಗಳೂರಿನಲ್ಲಿ ಒಂದು ತಂಡ ಹುಡುಕಾಟ ನಡೆಸುತ್ತಿದೆ.

Leave a Reply

Your email address will not be published. Required fields are marked *

error: Content is protected !!