ಉದಯವಾಹಿನಿ, ಕೋಲ್ಕತ್ತಾ: ಬಾಂಗ್ಲಾದೇಶದಲ್ಲಿ ಶುಕ್ರವಾರ ಬೆಳಿಗ್ಗೆ 5.7 ತೀವ್ರತೆಯ ಭೂಕಂಪ ಸಂಭವಿಸಿದ ನಂತರ ಕೋಲ್ಕತ್ತಾ ಮತ್ತು ಪೂರ್ವ ಭಾರತದ ಇತರ ಭಾಗಗಳಲ್ಲಿ ಲಘು ಕಂಪನ ಸಂಭವಿಸಿದೆ. ಬೆಳಿಗ್ಗೆ 10.08 ಕ್ಕೆ ಸಂಭವಿಸಿದ ಭೂಕಂಪದ ಕೇಂದ್ರಬಿಂದು ಬಾಂಗ್ಲಾದೇಶದ ಢಾಕಾದಿಂದ ಪೂರ್ವ-ಆಗ್ನೇಯಕ್ಕೆ 10 ಕಿಲೋಮೀಟರ್ ದೂರದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ. ಘಟನೆಯಲ್ಲಿ ಆರು ಜನ ಮಂದಿ ಬಲಿಯಾಗಿದ್ದಾರೆ. ಭೂಕಂಪದ ಸಮಯದಲ್ಲಿ ಕೋಲ್ಕತ್ತಾ ಮತ್ತು ಪಕ್ಕದ ಪ್ರದೇಶಗಳ ನಿವಾಸಿಗಳು ಲಘು ಕಂಪನದ ಅನುಭವವಾಗಿದೆ ಮತ್ತು ಫ್ಯಾನ್‌ಗಳು ಅಲುಗಾಡಿವೆ ಎಂದು ಕೊಲ್ಕತ್ತಾದ ನಿವಾಸಿಗಳು ಹೇಳಿದ್ದಾರೆ.
ಭೂಮಿ ಕಂಪಿಸಿದಾಗ ಜನರು ತಮ್ಮ ಮನೆಗಳು ಮತ್ತು ಕಚೇರಿಗಳಿಂದ ಹೊರಗೆ ಹೆಜ್ಜೆ ಹಾಕುತ್ತಿರುವ ದೃಶ್ಯಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ. ಪಶ್ಚಿಮ ಬಂಗಾಳದ ದಕ್ಷಿಣ ಮತ್ತು ಉತ್ತರ ದಿನಾಜ್‌ಪುರ ಮತ್ತು ಕೂಚ್ ಬೆಹಾರ್ ಸೇರಿದಂತೆ ಮೇಘಾಲಯ, ತ್ರಿಪುರ ಮತ್ತು ಮಿಜೋರಾಂ ಸೇರಿದಂತೆ ಇತರ ರಾಜ್ಯಗಳಲ್ಲಿಯೂ ಕಂಪನದ ಅನುಭವವಾಗಿದೆ.

Leave a Reply

Your email address will not be published. Required fields are marked *

error: Content is protected !!