ಉದಯವಾಹಿನಿ, ಕೋಲಾರ: ಕೇರಳದ ಶಬರಿಮಲೆಗೆ ತೆರಳಿದ್ದ ಕೋಲಾರದ ಅಯ್ಯಪ್ಪ ಮಾಲಾಧಾರಿಯೊಬ್ಬರು ನಾಪತ್ತೆಯಾಗಿದ್ದಾರೆ.
ಅಮರೇಶ ನಾಪತ್ತೆಯಾದ ಮಾಲಾಧಾರಿ. ಕೋಲಾರ ಜಿಲ್ಲೆಯ ಮಾಲೂರು ತಾಲೂಕು ನೂಟುವೆ ಗ್ರಾಮದ ಅಮರೇಶ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಹೋದ ಸಂದರ್ಭದಲ್ಲಿ ನಾಪತ್ತೆಯಾಗಿದ್ದಾರೆ.
ಈ ಅಯ್ಯಪ್ಪ ಮಾಲಾಧಾರಿಗೆ ಮಾತು ಬರಲ್ಲ, ಕಾಣಿಸಿದಲ್ಲಿ ತಿಳಿಸುವಂತೆ ಕುಟುಂಬಸ್ಥರು ಮನವಿ ಮಾಡಿಕೊಂಡಿದ್ದಾರೆ. ಅಯ್ಯಪ್ಪ ಸ್ವಾಮಿ ದೇವಾಲಯದ ಪ್ರವೇಶ ದ್ವಾರದಲ್ಲಿ ಪ್ರವೇಶ ಪಡೆದ ಮೇಲೆ ಕಾಣೆಯಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!