
ಉದಯವಾಹಿನಿ, ನವದೆಹಲಿ: ರಾಷ್ಟ್ರ ರಾಜಧಾನಿ ದಿನೇ ದಿನೇ ಗ್ಯಾಸ್ ಚೇಂಬರ್ ಆಗಿ ಬದಲಾಗುತ್ತಿದೆ. ಅದರಂತೆ ದೆಹಲಿ ವಾಯು ಗುಣಮಟ್ಟ ಮತ್ತಷ್ಟು ಕಳಪೆಯಾಗಿದೆ. ಹೀಗಾಗಿ, ರಾಜಧಾನಿಗೆ ವಿಷಕಾರಿ ಗಾಳಿಯಿಂದ ಸದ್ಯಕ್ಕೆ ಮುಕ್ತಿ ಸಿಗುವ ಲಕ್ಷಣ ಇಲ್ಲ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ವರದಿ ನೀಡಿದೆ.
ನಿನ್ನೆಯಷ್ಟೇ 373 ರಷ್ಟಿದ್ದ ವಾಯುಗುಣಮಟ್ಟ ಇಂದು 360ಕ್ಕೆ ತಲುಪಿದ್ದು, ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ (Delhi NCR) ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಿದೆ. ಹೀಗಾಗಿ ಸ್ವಲ್ಪ ಸಮಯ ರಾಜಧಾನಿಯನ್ನ ತೊರೆಯುವುದು ಅಥವಾ ಮನೆಯಲ್ಲಿಯೇ ಇರುವುದು ಉತ್ತಮ ಎಂದು ತಜ್ಞರು ಹೇಳಿದ್ದಾರೆ. ಅದಕ್ಕೆ ತಕ್ಕಂತೆ ವಾಯು ಗುಣಮಟ್ಟ ನಿರ್ವಹಣಾ ಆಯೋಗವು (CAQM) ದೆಹಲಿ-ಎನ್ಸಿಆರ್ನಾದ್ಯಂತ 3ನೇ ಹಂತದ ಶ್ರೇಣೀಕೃತ ಪ್ರತಿಕ್ರಿಯೆ ಕ್ರಿಯಾ ಯೋಜನೆ (GRAP-3)ಯ ಕ್ರಮಗಳನ್ನು ಜಾರಿಗೊಳಿಸಿದೆ.
