ಉದಯವಾಹಿನಿ, ಮಸಾಲೆ ಪದಾರ್ಥಗಳಲ್ಲಿ ಒಂದಾದ ಕೊತ್ತಂಬರಿ ಬೀಜ ಆರೋಗ್ಯ ಮತ್ತು ಶಕ್ತಿಯುತ ಔಷಧೀಯ ಗುಣಗಳನ್ನು ಹೊಂದಿದೆ. ಜ್ವರ, ಶೀತ, ಕೆಮ್ಮಿನಂತಹ ಆರೋಗ್ಯ ಸಮಸ್ಯೆಗಳಿಗೆ ಇದರ ಕಷಾಯ ಮದ್ದಾಗಲಿದೆ. ಕೊತ್ತಂಬರಿ ಬೀಜದ ನೀರನ್ನು ಖಾಲಿ ಹೊಟ್ಟೆಗೆ ಕುಡಿಯುವುದರಿಂದ ನಾನಾ ಆರೋಗ್ಯಕಾರಿ ಪ್ರಯೋಜನ ಸಿಗಲಿದ್ದು, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇದರೊಂದಿಗೆ ದೇಹದಲ್ಲಿನ ಹೆಚ್ಚುವರಿ ಕೊಬ್ಬನ್ನು ಕರಗಿಸಲು ನೆರವಾಗಲಿದೆ. ಇದು ದೇಹದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದು ಹೃದ್ರೋಗ ಮತ್ತು ಪಾರ್ಶ್ವವಾಯು ಅಪಾಯ ಕಡಿಮೆ ಮಾಡುತ್ತದೆ. ಮಧುಮೇಹ ನಿಯಂತ್ರಿಸಲು ಸಹಾಯಕ. ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಕೊತ್ತಂಬರಿ ಬೀಜದ ನೀರಿನ ಕುಡಿಯುವುದರಿಂದ ದೇಹದ ಚಯಾಪಚಯ ಕ್ರಿಯೆ ಹೆಚ್ಚುತ್ತದೆ. ಇದರಿಂದ ಸುಲಭವಾಗಿ ತೂಕವನ್ನು ಸಹ ಇಳಿಕೆ ಮಾಡಬಹುದಾಗಿದ್ದು, ಚಯಾಪಚಯ ಕ್ರಿಯೆಯನ್ನು ಸರಾಗಗೊಳಿಸುತ್ತದೆ.
ಅಜೀರ್ಣ ಸಮಸ್ಯೆಗೆ ಕೊತ್ತಂಬರಿ ಬೀಜದ ನೀರು ರಾಮಬಾಣವಾಗಿದ್ದು, ಈ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದವರು ದಿನಾ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕೊತ್ತಂಬರಿ ಬೀಜದ ನೀರನ್ನು ಕುಡಿಯುವದರಿಂದ ಅಜೀರ್ಣ ಸಮಸ್ಯೆಯನ್ನು ಸುಲಭವಾಗಿ ಹೋಗಲಾಡಿಸಬಹುದಾಗಿದೆ. ಕೊತ್ತಂಬರಿ ಬೀಜವು ಅತ್ಯುತ್ತಮ ರೀತಿಯಲ್ಲಿ ಸಹಾಯ ಮಾಡುತ್ತದೆ. ಕೊತ್ತಂಬರಿ ಬೀಜದಲ್ಲಿ ಇರುವ ಬೋರ್ನಿಯೋಲ್ ಮತ್ತು ಲಿನೂಲ್ ಸಂಯುಕ್ತಗಳು ಜೀರ್ಣ ಕ್ರಿಯೆಗೆ ಸಹಾಯ ಮಾಡುತ್ತವೆ.
ಈ ಕೊತ್ತಂಬರಿ ಬೀಜದ ಪ್ರತಿದಿನ ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಲಿದ್ದು, ಇವುಗಳಲ್ಲಿ ಉತ್ಕರ್ಷಣ ನಿರೋಧಕಗಳು, ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ ಗುಣಗಳು ಹೇರಳವಾಗಿವೆ. ಇದರಲ್ಲಿನ ಆ್ಯಂಟಿ ಆಕ್ಸಿಡೆಂಟ್ಗಳು ದೇಹದಲ್ಲಿನ ಫ್ರೀ ರ್ಯಾಡಿಕಲ್ಗಳನ್ನು ಕಡಿಮೆ ಮಾಡಲು ಸಹಾಯ ಸಹಾಯ ಮಾಡಲಿದ್ದು, ಈ ಮೂಲಕ ನಿಮ್ಮ ದೇಹದಲ್ಲಿನ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ.
ಸಣ್ಣ ಆಗಬೇಕೆಂದು ಯಾರಿಗೆ ಆಸೆ ಇರುವುದಿಲ್ಲ ಹೇಳಿ. ಪ್ರತಿಯೋರ್ವರು ದೇಹದ ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿರುತ್ತಾರೆ. ಅದಕ್ಕಾಗಿ ಒಂದಲೊಂದು ಸರ್ಕಸ್ ಮಾಡುತ್ತಲೇ ಇರುತ್ತಾರೆ. ನೀವು ಇಂತಹದೇ ಪ್ರಯತ್ನದಲ್ಲಿದ್ದರೆ ಈ ನೀರನ್ನು ಕುಡಿದರೆ ಸಾಕು. ಈ ನೀರನ್ನು ಕುಡಿಯುವುದರಿಂದ ಚಯಾಪಚಯ ಕ್ರಿಯೆ ಸುಧಾರಿಸಲಿದ್ದು, ಜೀರ್ಣಕ್ರಿಯೆ ಸಮಸ್ಯೆಗಳು ಬರದಂತೆ ತಡೆಯಲು ಸಹಾಯ ಮಾಡುತ್ತದೆ. ಜತೆಗೆ ದೇಹದಲ್ಲಿ ಸಂಗ್ರಹವಾಗುವ ಅನಗತ್ಯ ಕೊಬ್ಬನ್ನು ಕರಗಿಸಲಿದ್ದು, ಸುಲಭವಾಗಿ ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ.
