ಉದಯವಾಹಿನಿ, ಈ ಮೊದಲು ‘ತಾಯವ್ವ’ ಎಂಬ ಸಿನಿಮಾದಲ್ಲಿ ನಟಿಸಿದ್ದ, ಗೀತಪ್ರಿಯ ಸುರೇಶ್ ಕುಮಾರ್ ಇದೀಗ ಮತ್ತೊಂದು ಚಿತ್ರದಲ್ಲಿ ಅಭಿನಯಿಸಿದ್ದಾರೆ. ಆ ಚಿತ್ರದ ಹೆಸರು ‘ಅಪರಿಚಿತೆ’. ಇತ್ತೀಚಿಗೆ ಈ ಚಿತ್ರದ ಟ್ರೇಲರ್ ಅನಾವರಣ ಸಮಾರಂಭ ನಗರದ ಖಾಸಗಿ ಹೋಟೆಲ್ ನಲ್ಲಿ ಅದ್ದೂರಿಯಾಗಿ ನೆರವೇರಿತು. ಮಾಜಿ ಮುಖ್ಯಮಂತ್ರಿ, ಮಾಜಿ ಬಿ.ಜೆ.ಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ ಟ್ರೇಲರ್ ಅನಾವರಣ ಮಾಡಿದರು. ಸದಾನಂದ ಗೌಡ ಅವರ ಪತ್ನಿ ಡಾಟಿ ಸದಾನಂದ ಗೌಡ ಹಾಗೂ ನಟಿ ತಾರಾ ಅನುರಾಧ ಕೂಡ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ನಟಿ ತಾರಾ “ಅಪರಿಚಿತೆ” ಹಾಡೊಂದನ್ನು ಬಿಡುಗಡೆ ಮಾಡಿದರು. ನಂತರ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು.
ಗೀತಪ್ರಿಯ ಅವರು ಒಂದೊಳ್ಳೆ ಉದ್ದೇಶವಿಟ್ಟುಕೊಂಡು ಈ ಸಿನಿಮಾ ಮಾಡಿದ್ದಾರೆ. ನಾವು ಸಮಾಜಕ್ಕೆ ಏನಾದರೂ ಉತ್ತಮ ಸಂದೇಶ ಕೊಡಬೇಕಾದರೆ, ಅದನ್ನು ಸುಲಭವಾಗಿ ತಲುಪಿಸುವ ಮಾರ್ಗ ಸಿನಿಮಾ. ಅಂತಹ ಸಿನಿಮಾ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡುತ್ತಿರುವ ಗೀತಪ್ರಿಯ ಸುರೇಶ್ ಕುಮಾರ್ ಮತ್ತು ತಂಡಕ್ಕೆ ಶುಭವಾಗಲಿ ಎಂದು ಸದಾನಂದ ಗೌಡ ಅವರು ಹಾರೈಸಿದರು. ಡಾಟಿ ಸದಾನಂದ ಗೌಡ ಹಾಗೂ ತಾರಾ ಅನುರಾಧ ಸಹ ಚಿತ್ರತಂಡಕ್ಕೆ ಶುಭ ಕೋರಿದರು. 1985ರಲ್ಲಿ ನಾನು ಹಾಗೂ ನನ್ನ ಪತಿ ಸೇರಿ ಶಿಕ್ಷಣ ಸಂಸ್ಥೆ ಆರಂಭಿಸಿದ್ದೆವು. ಹತ್ತು ಜನರಿಂದ ಆರಂಭವಾದ ಈ ಸಂಸ್ಥೆಯಲ್ಲಿ ಈಗ ಹತ್ತು ಸಾವಿರ ಜನ ವ್ಯಾಸಂಗ ಮಾಡುತ್ತಿದ್ದಾರೆ. ಈ ಹಿಂದೆ “ತಾಯವ್ವ” ಎಂಬ ಚಿತ್ರದಲ್ಲಿ ನಟಿಸಿದ್ದೆ. ಈಗ “ಅಪರಿಚಿತೆ” ಎಂಬ ಚಿತ್ರದಲ್ಲಿ ಅಭಿನಯಿಸಿದ್ದೇನೆ.

Leave a Reply

Your email address will not be published. Required fields are marked *

error: Content is protected !!