ಉದಯವಾಹಿನಿ, ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಕ್ರಿಕೆಟಿಗ ವೆಂಕಟೇಶ ಪ್ರಸಾದ್ ಅವಿರೋಧವಾಗಿ ಆಯ್ಕೆ ಆಗಿದ್ದು ಬ್ರಿಜೇಶ್ ಪಾಟೇಲ್ ಬಣಕ್ಕೆ ತೀವ್ರ ಮುಖಭಂಗವಾಗಿದೆ.ಅಧ್ಯಕ್ಷ ಸ್ಥಾನಕ್ಕೆ ವೆಂಕಟೇಶ್ ಪ್ರಸಾದ್ ಹಾಗೂ ಶಾಂತಕುಮಾರ್ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಸಲ್ಲಿಕೆ ಅಂತ್ಯಗೊಂಡು ಪರಿಶೀಲನೆ ವೇಳೆ ಬ್ರಿಜೇಶ್ ಬಣದ ಶಾಂತಕುಮಾರ್ ನಾಮಪತ್ರ ತಿರಸ್ಕೃತಗೊಂಡಿದೆ. ಶಾಂತಕುಮಾರ್ ಅವರು 200 ರೂ. ಸಬ್‌ಸ್ಕ್ರಿಪ್ಶನ್‌ ಫೀಸ್ ಕಟ್ಟಿಲ್ಲದ ಕಾರಣ ಅರ್ಜಿ ತಿರಸ್ಕೃತವಾಗಿದೆ. ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ ಆಗಿದ್ದಾರೆ.
ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಕಣಕ್ಕಿಳಿಯುತ್ತಿದ್ದಂತೆ ಹಿರಿಯ ಆಟಗಾರರು ವೆಂಕಟೇಶ್ ಪ್ರಸಾದ್‌ಗೆ ಬೆಂಬಲ ನೀಡಿದ್ದರು. ಮಾಜಿ ಕ್ರಿಕೆಟಿಗ, ಮಾಜಿ ಕೆಎಸ್‌ಸಿಎ ಅಧ್ಯಕ್ಷ ಅನಿಲ್ ಕುಂಬ್ಳೆ, ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಸೇರಿದಂತೆ ಹಲವರು ಬೆಂಬಲ ನೀಡಿದ್ದರು.

Leave a Reply

Your email address will not be published. Required fields are marked *

error: Content is protected !!