, ಉದಯವಾಹಿನಿ, ರಾಮನಗರ: ಬಿಡದಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 10ಕ್ಕೂ ಹೆಚ್ಚು ಕಳ್ಳತನ, ದರೋಡೆ ಕೇಸ್‌ನಲ್ಲಿ ಭಾಗಿಯಾಗಿದ್ದ 8 ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಗಳನ್ನು ಸದ್ದಾಂ ಹುಸೇನ್, ಶಿವಪ್ರಸಾದ್, ಯಶವಂತ್ ಕುಮಾರ್.ಆರ್ ಎಂದು ಗುರುತಿಸಲಾಗಿದೆ. ಒಟ್ಟು ನಾಲ್ವರು ಯುವಕರು ಹಾಗೂ ಕಾನೂನು ಸಂಘರ್ಷಕ್ಕೆ ಒಳಗಾದ ನಾಲ್ವರು ಬಾಲಕಿಯರ ಬಂಧಿಸಿದ್ದಾರೆ.
ಆರೋಪಿಗಳು ನ.18ರಂದು ಆನ್‌ಲೈನ್‌ನಲ್ಲಿ ಕ್ಯಾಬ್ ಬುಕ್ ಮಾಡಿದ್ದರು. ಬಳಿಕ ನಿರ್ಜನ ಪ್ರದೇಶ ಬರುತ್ತಿದ್ದಂತೆ ಕಾರನ್ನು ನಿಲ್ಲಿಸುವಂತೆ ತಿಳಿಸಿದ್ದಾರೆ. ರಾಡ್‌ನಿಂದ ಚಾಲಕನನ್ನು ಬೆದರಿಸಿ, ಆತನನ್ನು ಅಲ್ಲಿಯೇ ಇಳಿಸಿ, ಕಾರನ್ನು ದರೋಡೆ ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ಚಾಲಕ ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ. ದೂರಿನನ್ವಯ ತನಿಖೆಗಿಳಿದ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!