ಉದಯವಾಹಿನಿ, ಲೆಬನಾನ್: ಇರಾನ್ ಬೆಂಬಲಿತ ಹಿಜ್ಬುಲ್ಲಾ ಸಂಘಟನೆಯ ನಾಯಕ ಇಸ್ರೇಲ್ಗೆ ವಾರ್ನಿಂಗ್ ಕೊಟ್ಟಿದ್ದಾರೆ. ತನ್ನ ಉನ್ನತ ಮಿಲಿಟರಿ ಕಮಾಂಡರ್ ಹತ್ಯೆ ಮಾಡಿರುವ ಇಸ್ರೇಲ್ ವಿರುದ್ಧ ಸೇಡು ತೀರಿಸಿಕೊಳ್ಳುವ ಹಕ್ಕು ನಮಗಿದೆ ಎಂದು ಹಿಜ್ಬುಲ್ಲಾ ಸಂಘಟನೆಯ ನಾಯಕ ನಯೀಮ್ ಖಾಸಿಮ್ ಎಚ್ಚರಿಸಿದ್ದಾರೆ. ಈ ಮೂಲಕ ಇಸ್ರೇಲ್ ಮತ್ತು ಹಿಜ್ಬುಲ್ಲಾ ಸಂಘಟನೆಯ ನಡುವೆ ಮತ್ತೆ ಯುದ್ಧ ಶುರುವಾಗುವ ಭೀತಿ ಮಧ್ಯಪ್ರಾಚ್ಯದಲ್ಲಿ ಶುರುವಾಗಿದೆ.
ಉನ್ನತ ಮಿಲಿಟರಿ ಕಮಾಂಡರ್ ಹತ್ಯೆ ಮಾಡಿರುವ ಇಸ್ರೇಲ್ ವಿರುದ್ಧ ಸೇಡು ತೀರಿಸಿಕೊಳ್ಳುವ ಹಕ್ಕು ನಮಗಿದೆ ಎಂದು ಹಿಜ್ಬುಲ್ಲಾ ಸಂಘಟನೆಯ ನಾಯಕ ನಯೀಮ್ ಖಾಸಿಮ್ ಎಚ್ಚರಿಸಿದ್ದಾರೆ. ಈ ಮೂಲಕ ಇಸ್ರೇಲ್ ಮತ್ತು ಹಿಜ್ಬುಲ್ಲಾ ಸಂಘಟನೆಯ ನಡುವೆ ಮತ್ತೆ ಯುದ್ಧ (War) ಶುರುವಾಗುವ ಭೀತಿ ಮಧ್ಯಪ್ರಾಚ್ಯದಲ್ಲಿ ಶುರುವಾಗಿದೆ.
ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧಕ್ಕೆ ಕದನ ವಿರಾಮ ಘೋಷಿಸಿದ್ದರು ಇಸ್ರೇಲ್ ಸೇನೆ ಕಳೆದ ನವೆಂಬರ್ 23ರಂದು ಬೈರುತ್ ನಗರದ ಮೇಲೆ ದಾಳಿ ನಡೆಸಿತ್ತು. ಈ ದಾಳಿಯಲ್ಲಿ ಹಿಜ್ಬುಲ್ಲಾ ಸಂಘಟನೆಯ ಮಿಲಿಟರಿ ಮುಖ್ಯಸ್ಥ ಹೈಥಮ್ ಅಲಿ ತಬ್ತಬಾತಿ ಸಾವನ್ನಪ್ಪಿದ್ದನು. ಕಳೆದ ಜೂನ್ ನಂತರ ಇದೇ ಮೊದಲ ಬಾರಿಗೆ ಇಸ್ರೇಲ್ ದಾಳಿ ಮಾಡಿತ್ತು. ಬೈರುತ್ನ ದಕ್ಷಿಣ ಉಪನಗರಗಳಲ್ಲಿ ನಡೆದ ಈ ದಾಳಿಯಲ್ಲಿ ಐವರು ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ ಎಂದು ಲೆಬನಾನ್ನ ಆರೋಗ್ಯ ಸಚಿವಾಲಯ ತಿಳಿಸಿತ್ತು.
