ಉದಯವಾಹಿನಿ, ಮುಂಬೈ: ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ನಲ್ಲಿ ಅಯೋಧ್ಯೆಯಲ್ಲಿರುವ ಬಾಬರಿ ಮಸೀದಿಯ ಮಾದರಿಯಲ್ಲಿ ಹೊಸ ಮಸೀದಿಗೆ ತೃಣಮೂಲ ಕಾಂಗ್ರೆಸ್ನ ಉಚ್ಛಾಟಿತ ಶಾಸಕ ಹುಮಾಯೂನ್ ಕಬೀರ್ ಇಂದು ಶಿಲಾನ್ಯಾಸ ನೆರವೇರಿಸಿದರು.
ಬಿಗಿ ಭದ್ರತೆಯ ನಡುವೆ, ಮುರ್ಷಿದಾಬಾದ್ ಜಿಲ್ಲೆಯ ರೆಜಿನಗರದಲ್ಲಿ ಅಮಾನತುಗೊಂಡ ಟಿಎಂಸಿ ಶಾಸಕ ಹುಮಾಯೂನ್ ಕಬೀರ್ ಮಸೀದಿಗೆ ಅಡಿಪಾಯ ಹಾಕಿದರು. ರೆಜಿನಗರ ಮತ್ತು ಹತ್ತಿರದ ಬೆಲ್ದಂಗಾ ಪ್ರದೇಶದಲ್ಲಿ ಪೊಲೀಸ್, ಆರ್ಎಎಫ್ ಹಾಗೂ ಗಡಿ ಭದ್ರತಾ ಪಡೆಗಳ (BSF) ದೊಡ್ಡ ತುಕಡಿಗಳನ್ನೇ ಭದ್ರತೆಗೆ ನಿಯೋಜಿಸಲಾಗಿತ್ತು. ಮಸೀದಿಯ ಶಿಲಾನ್ಯಾಸ ಸಮಾರಂಭದ ವೇದಿಕೆಯಲ್ಲಿ ಹುಮಾಯೂನ್ ಕಬೀರ್, ಧರ್ಮಗುರುಗಳ ಜೊತೆಗೆ ರಿಬ್ಬನ್ ಕತ್ತರಿಸುವ ಮೂಲಕ ಶಿಲಾನ್ಯಾಸ ನೆರವೇರಿಸಿದ್ರು. ಸಮಾರಂಭದ ಸಮಯದಲ್ಲಿ, ʻನಾರಾ-ಎ-ತಕ್ಬೀರ್, ಅಲ್ಲಾಹು ಅಕ್ಬರ್ʼ ಘೋಷಣೆಗಳು ಮೊಳಗಿದವು. ಬೆಳಿಗ್ಗೆಯಿಂದಲೇ ಸ್ಥಳದಲ್ಲಿ ಸಾವಿರಾರು ಜನರು ಜಮಾಯಿಸಿದ್ದರು.
ಈ ವಾರದ ಆರಂಭದಲ್ಲಿ ಹುಮಾಯೂನ್ ಕಬೀರ್ ಅವರನ್ನು ಟಿಎಂಸಿಯಿಂದ ಅಮಾನತುಗೊಳಿಸಿತು. ಪಕ್ಷವು ಕೋಮು ರಾಜಕೀಯ ವಿಷಯ ಎಂದು ವಿವರಿಸಿದ್ದನ್ನು ಉಲ್ಲೇಖಿಸಿತ್ತು. ಕಬೀರ್ ಈ ತಿಂಗಳ ಆರಂಭದಲ್ಲಿ ಶಿಲಾನ್ಯಾಸ ನೆರವೇರಿಸುವುದಾಗಿ ಘೋಷಿಸಿದ್ದರು, ಇದು ರಾಜಕೀಯ ಟೀಕೆಗಳನ್ನು ಹುಟ್ಟುಹಾಕಿತು ಮತ್ತು ರಾಜ್ಯ ಆಡಳಿತವು ಭದ್ರತೆ ಹೆಚ್ಚಿಸುವಂತೆ ಒತ್ತಾಯಿಸಿತು. ಅಯೋಧ್ಯೆಯಲ್ಲಿ ಬಾಬರಿ ಮಸೀದಿ ಧ್ವಂಸಗೊಂಡ ವಾರ್ಷಿಕೋತ್ಸವವಾದ ಡಿಸೆಂಬರ್ 6 ರಂದು ಕಬೀರ್ ಶಿಲಾನ್ಯಾಸ ಸಮಾರಂಭಕ್ಕೆ ಆಯ್ಕೆ ಮಾಡಿಕೊಂಡಿದ್ದರು.
