ಉದಯವಾಹಿನಿ, ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ನಟನೆಯ ಮೊದಲ ತೆಲುಗು ಸಿನಿಮಾದ ಮುಹೂರ್ತ ಇಂದು (ಡಿ.6) ನೆರವೇರಿದೆ. 5 ಬಾರಿ ಶಾಸಕರಾಗಿ ಆಯ್ಕೆಯಾಗಿ ಸರಳ ಜೀವನ ನಡೆಸಿದ ಆಂಧ್ರದ ಮಾಜಿ ಶಾಸಕ ಗುಮ್ಮಡಿ ನರಸಯ್ಯ ಅವರ ಜೀವನಾಧಾರಿತ ಸಿನಿಮಾಗೆ ಆಂಧ್ರದಲ್ಲಿ ಮುಹೂರ್ತ ನೆರವೇರಿದೆ. ಸಿನಿಮಾಗೆ ಗುಮ್ಮಡಿ ನರಸಯ್ಯ ಎಂದು ಟೈಟಲ್ ಇಡಲಾಗಿದ್ದು, ಸರಳವಾಗಿ ಚಿತ್ರದ ಮುಹೂರ್ತ ಕೂಡ ನೆರವೇರಿದೆ.
ಮುಹೂರ್ತದಲ್ಲಿ ನಟ ಶಿವರಾಜ್ಕುಮಾರ್, ಪತ್ನಿ ಗೀತಾ ಶಿವರಾಜ್ಕುಮಾರ್ ಕೂಡಾ ಭಾಗಿಯಾಗಿದ್ದರು. ಡಾ.ರಾಜ್ಕುಮಾರ್, ಪಾರ್ವತಮ್ಮ ಹಾಗೂ ಅಪ್ಪು ಭಾವಚಿತ್ರವಿಟ್ಟು ಪೂಜೆ ಸಲ್ಲಿಸಿ ಬಳಿಕ ಸಿನಿಮಾದ ಮುಹೂರ್ತ ನೆರವೇರಿಸಲಾಗಿದೆ. ನಟ ಶಿವರಾಜ್ಕುಮಾರ್ ಅವರು ನಾಯಕರಾಗಿ ನಟಿಸುತ್ತಿರುವ ಮೊದಲ ತೆಲುಗು ಸಿನಿಮಾ ಅನ್ನೋದು ಮತ್ತೊಂದು ವಿಶೇಷವಾಗಿದೆ. ಈಗಾಗ್ಲೇ ಸಿನಿಮಾ ಫಸ್ಟ್ಲುಕ್ ಟೀಸರ್ ರಿಲೀಸ್ ಆಗಿದ್ದು, ಈ ಸಿನಿಮಾದಲ್ಲಿ ಶಿವಣ್ಣನ ಪಾತ್ರ ಪರಿಚಯವಾಗಿದೆ.
