ಉದಯವಾಹಿನಿ, ಮುರ್ಷಿದಾಬಾದ್‌: ತೃಣಮೂಲ ಕಾಂಗ್ರೆಸ್ ನಿಂದ ಅಮಾನತುಗೊಂಡಿದ್ದ ಟಿಎಂಸಿ ಶಾಸಕ ಹುಮಾಯೂನ್ ಕಬೀರ್ ಮುರ್ಷಿದಾಬಾದ್‌ನಲ್ಲಿ ಬಾಬರಿ ಮಸೀದಿಗೆ ಶಿಲಾನ್ಯಾಸ ನೆರವೇರಿಸಿದರು. ಇದರ ಬಳಿಕ ಬಿಜೆಪಿ ನಾಯಕರು ಮುರ್ಷಿದಾಬಾದ್ ರಾಮ ಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಿದ್ದಾರೆ. ಇದು ಈಗ ರಾಜಕೀಯ ನಾಯಕರ ನಡುವೆ ವಾದ ವಿವಾದಕ್ಕೆ ( ಕಾರಣವಾಗಿದೆ. ಬಿಜೆಪಿ ನಾಯಕ ಸಖರೋವ್ ಸರ್ಕಾರ್ ಮತ್ತು ಅವರ ಪಕ್ಷದ ವಿಭಾಗವು ಶನಿವಾರ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.

ಪಕ್ಷ ವಿರೋಧಿ ಹೇಳಿಕೆ ನೀಡಿ ಈ ತಿಂಗಳ ಆರಂಭದಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದಿಂದ ಹೊರಹಾಕಲ್ಪಟ್ಟ ಶಾಸಕ ಹುಮಾಯೂನ್ ಕಬೀರ್  ಮುರ್ಷಿದಾಬಾದ್‌ನಲ್ಲಿ ಬಾಬರಿ ಮಸೀದಿಗೆ ಶಿಲಾನ್ಯಾಸ ನೆರವೇರಿಸಿದ್ದರು. ಇದಕ್ಕೆ ಪ್ರತಿಯಾಗಿ ಬಿಜೆಪಿ ನಾಯಕರು ಅಯೋಧ್ಯೆಯ ರಾಮ ಲಾಲಾ ದೇವಾಲಯದ ಪ್ರತಿಕೃತಿ ಸ್ಥಾಪನೆಗೆ ಭೂಮಿ ಪೂಜೆ ಮತ್ತು ಶಿಲಾ ಪ್ರತಿಷ್ಠಾಪನೆ ನೆರವೇರಿಸಿದರು.
ಬಳಿಕ ಮಾತನಾಡಿದ ಬಿಜೆಪಿ ನಾಯಕ ಸಖರೋವ್ ಸರ್ಕಾರ್, ಬೆಹ್ರಾಂಪೋರ್‌ನಲ್ಲಿ ಮುರ್ಷಿದಾಬಾದ್ ರಾಮ ಮಂದಿರ ಸ್ಥಾಪನೆಗೆ ಎಲ್ಲಾ ವಿಧಿವಿಧಾನಗಳನ್ನು ನಾವು ನಡೆಸುತ್ತೇವೆ. ಅಯೋಧ್ಯೆಯ ರಾಮ ಲಾಲಾ ದೇವಾಲಯದ ಪ್ರತಿಕೃತಿಯನ್ನು ಸ್ಥಾಪಿಸಲು ನಾವು ನಿರ್ಧರಿಸಿದ್ದೇವೆ ಮತ್ತು ರಾಮ ಮಂದಿರ ಚಾರಿಟಬಲ್ ಟ್ರಸ್ಟ್ ಅನ್ನು ರಚಿಸುವ ಮೂಲಕ ಶಿಲಾ ಪ್ರತಿಷ್ಠೆಯನ್ನು ನಡೆಸಿದ್ದೇವೆ. ಬೆಹ್ರಾಂಪೋರ್‌ನಲ್ಲಿ ಈ ದೇವಾಲಯವು ತುಂಬಾ ದೊಡ್ಡದಾಗಿರುತ್ತದೆ. ಇದು ಆಸ್ಪತ್ರೆ ಮತ್ತು ಶಾಲೆಯನ್ನು ಸಹ ಒಳಗೊಂಡಿರುತ್ತದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!