ಉದಯವಾಹಿನಿ, ಹಾವೇರಿ: ಜನವರಿಯಲ್ಲಿ ದರ್ಶನ್ ಅಣ್ಣನಿಗೆ ಜಾಮೀನು ಸಿಗುವ ನಿರೀಕ್ಷೆಯಿದೆ. ಒಂದು ವೇಳೆ ಸಿಗದಿದ್ರೆ ನಾನೇ ಖುದ್ದು ಜೈಲಿಗೆ ಹೋಗಿ ಆಶೀರ್ವಾದ ಪಡೆದು ಬರ್ತೀನಿ ಎಂದು ನಟ ಹಾಗೂ ಸಚಿವ ಜಮೀರ್ ಪುತ್ರ ಝೈದ್ ಖಾನ್ ಹೇಳಿದ್ದಾರೆ. ಹಾವೇರಿಯಲ್ಲಿ ಕಲ್ಟ್ ಸಿನಿಮಾ ಪ್ರಮೋಷನ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೋವಿನಲ್ಲೂ ದರ್ಶನ್ ಅಭಿಮಾನಿಗಳಿಗೆ ಸಕ್ಸಸ್ ಸಿನಿಮಾ ಕೊಟ್ಟಿದ್ದಾರೆ. ʻದರ್ಶನʼ ಎಂಬ ಹೆಸರಿನಿಂದ ಸಿನಿಮಾ ಸಕ್ಸಸ್ ಆಗೇ ಆಗುತ್ತದೆ. ಇವೆರಡನ್ನ ನಾನು ಡೆವಿಲ್ ನೋಡಿ ಕಲಿತುಕೊಂಡೆ. ಸಿನಿಮಾ ತುಂಬಾ ಚೆನ್ನಾಗಿ ಇದೆ. ದರ್ಶನ್ ಅಣ್ಣನಿಗೆ ಜನವರಿಯಲ್ಲಿ ಬೇಲ್ ಸಿಗುವ ನಿರೀಕ್ಷೆಯಿದೆ ಎಂದರು.
ಇನ್ನೂ ಸಚಿವ ಜಮೀರ್ ಅಹ್ಮದ್ ಅವರ ಕಾಂಟ್ರವರ್ಸಿಗಳು ನಿಮ್ಮ ಸಿನಿಮಾಗೆ ಎಫೆಕ್ಟ್ ಆಗಿದ್ಯಾ ಎಂಬ ಪತ್ರಕರ್ತರ ಪ್ರಶ್ನೆ ಉತ್ತರಿಸಿ, ಖಂಡಿತಾ ಆಗಿದೆ. ನನ್ನ ಹಿಂದಿನ ಸಿನಿಮಾ ಮೇಲೆ ಅವರ ರಾಜಕೀಯದ ಬೆಳವಣಿಗಯಿಂದ ಪರಿಣಾಮವಾಗಿದೆ. ಜಮೀರ್ ಅವ್ರ ರಾಜಕೀಯ ಕಾಂಟ್ರವರ್ಸಿಗಳಿಂದ ನನ್ನ ಸಿನಿಮಾ ಬಾಯ್ಕಾಟ್ ಮಾಡಿದ್ರು. ಮನಸಲಿ ಕೇಲವು ಮಾತುಗಳು ಇವೆ. ಅವುಗಳನ್ನ ಬಾಯಲ್ಲಿ ಈಗ ಹೇಳೊಕೆ ಆಗಲ್ಲ. ಗೆದ್ದ ಮೇಲೆ ಹೇಳಿದ್ರೆ ಅದಕ್ಕೆ ತೂಕ ಇರುತ್ತದೆ. ಗೆದ್ದಾದ ಬಳಿಕ ಎಲ್ಲಾ ಹೇಳುತ್ತೇನೆ ಎಂದರು.
