ಉದಯವಾಹಿನಿ, ತುಮಕೂರು: ಗೃಹ ಸಚಿವ ಜಿ. ಪರಮೇಶ್ವರ್ ಈ ರಾಜ್ಯದ ಮುಖ್ಯಮಂತ್ರಿ ಆಗಲಿ ಅನ್ನುವ ವೈಯಕ್ತಿಕ ಆಸೆ ನನಗಿದೆ ಎಂದು ಕೇಂದ್ರ ಸಚಿವ ವಿ ಸೋಮಣ್ಣ ಅಭಿಪ್ರಾಯಪಟ್ಟಿದ್ದಾರೆ. ತುಮಕೂರಿನ ಹೆಗ್ಗೆರೆಯಲ್ಲಿ ರೇಲ್ವೆ ಮೇಲ್ಸೆತುವೆ ಕಾಮಗಾರಿಗೆ ಗುದ್ದಲಿ ಪೂಜೆ ಬಳಿಕ ವೇದಿಕೆ ಭಾಷಣ ವೇಳೆ ಕೇಂದ್ರ ಸಚಿವ ವಿ. ಸೋಮಣ್ಣ ತಮ್ಮ ಇಂಗಿತ ಹೊರಹಾಕಿದರು. ಪರಮೇಶ್ವರ್ ಅದೃಷ್ಟದ ಗೃಹ ಮಂತ್ರಿಯಾಗಿದ್ದಾರೆ. ಎಲ್ಲೋ ಒಂದು ಕಡೆ ಅವರು ಈ ರಾಜ್ಯದ ಮುಖ್ಯಮಂತ್ರಿ ಆಗಲಿ ಅನ್ನೋ ಆಸೆ ಇದೆ ಎಂದು ಹೇಳಿದರಲ್ಲದೇ ಇದನ್ನ ನಾನೊಬ್ಬನೇ ಹೇಳುತ್ತಿಲ್ಲ ತುಮಕೂರಿನ ಮಹಾಜನತೆಯ ಅಭಿಪ್ರಾಯ ಎಂದು ಅಭಿಪ್ರಾಯಿಸಿದರು. ಈ ವೇಳೆ ಮಧ್ಯ ಪ್ರವೇಶ ಮಾಡಿದ ಶಾಸಕ ಸುರೇಶ್ ಗೌಡ, ಡಿಕೆಶಿ ಕೂಡಾ ಇದ್ದಾರೆ ಎಂದರು. ಅದಕ್ಕೆ ಪ್ರತಿಕ್ರಿಯಿಸಿದ ಸೋಮಣ್ಣ ಹಣೆಬರಹ ಯಾರಿಗೆ ಗೊತ್ತು, ಹಣೆ ಬರಹದಂತೆ ಆಗಲಿ ಎಂದರು.

 

Leave a Reply

Your email address will not be published. Required fields are marked *

error: Content is protected !!