ಉದಯವಾಹಿನಿ, ಇಸ್ಲಾಮಾಬಾದ್‌: ವಿಭಜನೆಯ ಬಳಿಕ ಪಾಕಿಸ್ತಾನದ ವಿಶ್ವವಿದ್ಯಾಲಯವೊಂದು ವಿದ್ಯಾರ್ಥಿಗಳಿಗೆ ಸಂಸ್ಕೃತ ಕಲಿಸಲು ಕೋರ್ಸ್ ಆರಂಭಿಸಿ ಸುದ್ದಿಯಾಗಿದೆ. ಲಾಹೋರ್ ಮ್ಯಾನೇಜ್ಮೆಂಟ್ ಸೈನ್ಸಸ್ ವಿಶ್ವವಿದ್ಯಾಲಯ 1947ರ ನಂತರ ಮೊದಲ ಬಾರಿಗೆ ಭಗವದ್ಗೀತೆ ( ಶ್ಲೋಕ ಮತ್ತು ಮಹಾಭಾರತವನ್ನು ಪರಿಚಯಿಸಿದ್ದು ನಾಲ್ಕು ಕ್ರೆಡಿಟ್ ಕೋರ್ಸ್ ಪ್ರಾರಂಭಿಸಿದೆ.
ವಿಶ್ವವಿದ್ಯಾಲಯ ಮೂರು ತಿಂಗಳ ಹಿಂದೆ ವಾರಾಂತ್ಯದಲ್ಲಿ ಸಂಸ್ಕೃತ ಕಾರ್ಯಾಗಾರ ಯೋಜಿಸಿತ್ತು. ಈ ಕಾರ್ಯಾಗಾರಕ್ಕೆ ವಿದ್ಯಾರ್ಥಿಗಳಿಂದ ಮತ್ತು ವಿದ್ವಾಂಸರಿಂದ ಉತ್ತಮ ಸ್ಪಂದನೆ ವ್ಯಕ್ತವಾದ ಹಿನ್ನೆಲೆಯಲ್ಲಿ ಈಗ ಪೂರ್ಣ ಪ್ರಮಾಣದ ಕೋರ್ಸ್‌ ಆರಂಭಿಸಿದೆ. ಈ ಕ್ರಮವು ಪಾಕಿಸ್ತಾನ ಮತ್ತು ಭಾರತದ ಸಾಮಾನ್ಯ ಸಾಂಸ್ಕೃತಿಕ ಪರಂಪರೆಗೆ ಮರು-ಸಂಪರ್ಕ ಸಾಧಿಸುವ ನಿಟ್ಟಿನಲ್ಲಿ ಒಂದು ಪ್ರಮುಖ ಹೆಜ್ಜೆ ಎಂದು ಪರಿಗಣಿಸಲಾಗಿದೆ.
ವಿಶ್ವವಿದ್ಯಾಲಯದ ಗುರ್ಮಾನಿ ಕೇಂದ್ರದ ನಿರ್ದೇಶಕ ಡಾ. ಅಲಿ ಉಸ್ಮಾನ್ ಕಾಸ್ಮಿ ಪ್ರತಿಕ್ರಿಯಿಸಿ, ಪಂಜಾಬ್ ವಿಶ್ವವಿದ್ಯಾಲಯದ ಗ್ರಂಥಾಲಯದಲ್ಲಿ ಸಂಸ್ಕೃತದ ಹಲವಾರು ಪ್ರಾಚೀನ ದಾಖಲೆಗಳನ್ನು ಸಂರಕ್ಷಿಸಲಾಗಿದೆ. 1947 ರ ವಿಭಜನೆಯ ನಂತರ ಇವುಗಳ ಬಗ್ಗೆ ಯಾರೂ ಹೆಚ್ಚಿನ ಸಂಶೋಧನೆ ಮಾಡಿಲ್ಲ. ವಿದೇಶಗಳಿಂದ ಆಗಮಿಸಿದ್ದ ಸಂಶೋಧಕರು ಮಾತ್ರ ಅವುಗಳನ್ನು ಓದುತ್ತಿದ್ದರು. ಈಗ ಈ ದಾಖಲೆಗಳನ್ನು ಲಾಹೋರ್ ವಿಶ್ವವಿದ್ಯಾಲಯಕ್ಕೆ ತರಲಾಗುವುದು ಎಂದಿದ್ದಾರೆ.

Leave a Reply

Your email address will not be published. Required fields are marked *

error: Content is protected !!