ಉದಯವಾಹಿನಿ, ಬೆಂಗಳೂರು: ಮೊಟ್ಟೆ ಪ್ರಿಯರು ನೋಡಲೇಬೇಕಾದ ಸ್ಟೋರಿ. ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಎಂಬ ವದಂತಿ ಹಿನ್ನೆಲೆ ಜನರ ಆತಂಕ ದೂರು ಮಾಡೋಕೆ ಆರೋಗ್ಯ ಇಲಾಖೆ ಮುಂದಾಗಿದೆ. ರಾಜ್ಯದ ಎಲ್ಲಾ ಬ್ರ್ಯಾಂಡ್‌ಗಳ ಮೊಟ್ಟೆ ಟೆಸ್ಟ್‌ಗೆ ಆರೋಗ್ಯ ಸಚಿವರು ಸೂಚಿಸಿದ್ದಾರೆ. ಜೊತೆಗೆ ಕಳೆದ 6 ತಿಂಗಳ ಹಿಂದೆ ಆಹಾರ ಸುರಕ್ಷತಾ ಇಲಾಖೆ ಟೆಸ್ಟ್‌ನಲ್ಲಿ ಮೊಟ್ಟೆ ಸೇಫ್ ಅಂತ ಕೂಡ ವರದಿ ಬಂದಿದೆ.

ಕಳೆದ ಕೆಲವು ದಿನಗಳಿಂದ ಭಾರೀ ಚರ್ಚೆಗೆ ಗ್ರಾಸವಾಗ್ತಿರೋ ವಿಚಾರ ಅಂದರೆ ಅದು ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಇದೆ ಅನ್ನೋ ವಿಚಾರ. ಜನ ಆತಂಕಕ್ಕೆ ಒಳಗಾಗಿದ್ದು ಮೊಟ್ಟೆ ತಿನ್ನೋದಕ್ಕೂ ಭಯ ಪಡುವಂತಾಗಿದೆ. ಜನರ ಆತಂಕ ದೂರು ಮಾಡೋದಕ್ಕೆ ಆರೋಗ್ಯ ಮತ್ತು ಆಹಾರ ಸುರಕ್ಷತಾ ಇಲಾಖೆ ಮುಂದಾಗಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜ್ಯದಲ್ಲಿ ಮೊಟ್ಟೆ ಟೆಸ್ಟ್ ಮಾಡೋದಕ್ಕೆ ಸೂಚನೆ ಕೊಟ್ಟಿದ್ದಾರೆ. ಜನ ಆತಂಕಕ್ಕೆ ಒಳಗಾಗೋದು ಬೇಡ ಎಲ್ಲಾ ಬ್ರ್ಯಾಂಡ್‌ಗಳನ್ನ ಟೆಸ್ಟ್ ಮಾಡೋಕೆ ಹೇಳ್ತೆನೆ ಅಂದಿದ್ದಾರೆ. ಇನ್ನೂ ಪ್ರಮುಖವಾಗಿ ವಾಗಿ ಕ್ಯಾನ್ಸರ್‌ಗೆ ಕಾರಣ ಆಗುವ ಅಂಶಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಒಂದು ವೇಳೆ ಆಥರ ತಪ್ಪು ಆಗಿದ್ರೆ ಶಿಕ್ಷೆ ಆಗುತ್ತೆ. ಜನರು ಗೊಂದಲಕ್ಕೆ ಒಳಗಾಗೋದು ಬೇಡ. ಜನರು ಆತಂಕ ಕೂಡ ಪಡೋದು ಬೇಡ ಅಂತಿದ್ದಾರೆ.

Leave a Reply

Your email address will not be published. Required fields are marked *

error: Content is protected !!