ಉದಯವಾಹಿನಿ, ಮೈಸೂರು: ಈ ಬಾರಿಯ ಐಪಿಎಲ್ ಪಂದ್ಯವನ್ನು ಬೆಂಗಳೂರಿನಲ್ಲೇ ನಡೆಸಲು ಬಿಸಿಸಿಐಗೆ (BCCI) ಮನವಿ ಮಾಡಿದ್ದೇವೆ ಎಂದು ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಬೆಂಗಳೂರಿನಲ್ಲಿ ಉದ್ಘಾಟನೆ ಪಂದ್ಯ ನಡೆಸುವಂತೆ ಈಗಾಗಲೇ ಬಿಸಿಸಿಐ ಜೊತೆ ಮಾತುಕತೆ ನಡೆಸಿದ್ದೇನೆ. ಬಿಸಿಸಿಐ ಸಹ ಬೆಂಗಳೂರಿನಲ್ಲಿ ಈ ಬಾರಿಯ ಉದ್ಘಾಟನೆ ಪಂದ್ಯ ನಡೆಸಲು ಮಾತುಕತೆ ನಡೆಸುತ್ತಿದೆ ಎಂದು ಹೇಳಿದ್ದಾರೆ.

ತಿ ವರ್ಷ ಐಪಿಎಲ್ ಟ್ರೋಫಿ ಗೆದ್ದ ಹೋಂ ಗ್ರೌಂಡ್‌ನಲ್ಲೇ ಉದ್ಘಾಟನೆ ಪಂದ್ಯ ನಡೆಯುತ್ತಿತ್ತು. ಆರ್‌ಸಿಬಿ ಸಂಭ್ರಮಾಚರಣೆಯ ವೇಳೆ ಘಟನೆಯಿಂದ ಸಾಕಷ್ಟು ಗೊಂದಲಗಳಾಗಿತ್ತು. ಹೀಗಾಗಿ, ನಮ್ಮ ತಂಡ ಚುನಾವಣೆ ಗೆದ್ದ ಬಳಿಕ ಈಗಾಗಲೇ ರಾಜ್ಯ ಸರ್ಕಾರದ ಜೊತೆ ಮಾತುಕತೆ ನಡೆಸಿದ್ದೇವೆ. ಸಿಎಂ-ಡಿಸಿಎA ಈಗಾಗಲೇ ಪಂದ್ಯಾವಳಿ ನಡೆಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಗೃಹ ಸಚಿವರ ಜೊತೆ ಫೋನ್ ಮೂಲಕ ಮಾತನಾಡಿದ್ದೇನೆ. ಶೀಘ್ರದಲ್ಲೇ ಈ ಬಾರಿಯ ಐಪಿಎಲ್ ಉದ್ಘಾಟನೆ ಪಂದ್ಯದ ದಿನಾಂಕ ನಿಗದಿಯಾಗಲಿದೆ. ಬೆಂಗಳೂರಿನಲ್ಲಿ ಐಪಿಎಲ್, ಅಂತಾರಾಷ್ಟ್ರೀಯ ಸೇರಿದಂತೆ ಎಲ್ಲಾ ಮಾದರಿಯ ಪಂದ್ಯಗಳು ನಡೆಯುತ್ತದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!