ಉದಯವಾಹಿನಿ , ಬೆಂಗಳೂರು: ಹೈಕೋರ್ಟ್ ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಬೈರತಿ ಬಸವರಾಜ್‌ ತನ್ನ ಮೊಬೈಲ್ ಸ್ವಿಚ್ ಆಫ್‌ ಮಾಡಿಕೊಂಡು ನಾಪತ್ತೆಯಾಗಿದ್ದಾರೆ. ಆದ್ರೆ ಕೊನೆದ್ದಾಗಿ ಅವರ ಲೈವ್‌ ಲೊಕೆಷನ್‌ ಮಹಾರಾಷ್ಟ್ರದ ಪುಣೆಯಲ್ಲಿ ಪತ್ತೆಯಾಗಿದೆ ಎಂದು ತನಿಖಾ ಮೂಲಗಳು ತಿಳಿಸಿವೆ.
ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬೈರತಿ ಬಸವರಾಜ್, ಅಲ್ಲಿಂದಲೇ ನಾಪತ್ತೆಯಾಗಿದ್ದಾರೆ. ಸಿಐಡಿ ಅಧಿಕಾರಿಗಳ ತಂಡ ಬೈರತಿ ಬಸವರಾಜ್ ಉಳಿದುಕೊಂಡಿದ್ದ ಜಾಗಕ್ಕೆ ಹೋಗಿ ಅಲ್ಲಿನ ಸಿಸಿಟಿವಿ, ಯಾವ ರಸ್ತೆಯ ಮೂಲಕ ಯಾವ ಕಡೆಗೆ ಹೋಗಿದ್ದಾರೆ ಅನ್ನೋದು ಸೇರಿದಂತೆ ಬೇರೆ ಬೇರೆ ಜಿಲ್ಲೆ ಮತ್ತು ರಾಜ್ಯಕ್ಕೆ ಕನೆಕ್ಟ್ ಆಗುವ ಟೋಲ್‌ಗಳ ಸಿಸಿಟಿವಿ ದೃಶ್ಯಾವಳಿಗಳನ್ನ ಪರಿಶೀಲಿಸಿದ್ದಾರೆ.

ಈ ವೇಳೆ ಬೈರತಿ ಬಸವರಾಜ್ ಗೋವಾ ಅಥವಾ ಮಹಾರಾಷ್ಟ್ರಕ್ಕೆ ಹೋಗಿರುವ ಮಾಹಿತಿ ಸಿಕ್ಕಿತ್ತು. ತನಿಖೆ ಮುಂದುವರೆಸಿದ ಅಧಿಕಾರಿಗಳಿಗೆ ಬೈರತಿ ಬಸವರಾಜ್ ಲೊಕೆಷನ್‌ ಕೊನೆಯದ್ದಾಗಿ ಮಹಾರಾಷ್ಟ್ರದ ಪುಣೆಯಲ್ಲಿ ಪತ್ತೆ ಯಾಗಿದ್ದು ಅಲ್ಲಿಂದ ಮೊಬೈಲ್ ಆಫ್‌ ಮಾಡ್ಕೊಂಡು ನಾಪತ್ತೆಯಾಗಿದ್ದಾರೆ ಅನ್ನೋದು ಗೊತ್ತಾಗಿದೆ.

Leave a Reply

Your email address will not be published. Required fields are marked *

error: Content is protected !!