ಉದಯವಾಹಿನಿ : ಮುಂದಿನ ವರ್ಷ ನಡೆಯುವ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಯ ಭಾರತ ತಂಡದಿಂದ ಶುಭಮನ್‌ ಗಿಲ್‌ ಅವರನ್ನು ಬಿಸಿಸಿಐ ಆಯ್ಕೆ ಸಮಿತಿ ಕೈಬಿಟ್ಟಿರುವ ಬಗ್ಗೆ ಟೆಸ್ಟ್‌ ತಂಡದ ಮಾಜಿ ಆರಂಭಿಕ ಆಕಾಶ್‌ ಚೋಪ್ರಾ ತಮ್ಮದೇ ಆದ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಟಿ20 ವಿಶ್ವಕಪ್‌ ಭಾರತ ತಂಡದಿಂದ ಗಿಲ್‌ ಅವರನ್ನು ತೆಗೆದಿರುವುದು ನಿಜಕ್ಕೂ ಧೈರ್ಯಶಾಲಿ ಕರೆ ಎಂದು ಕ್ರಿಕೆಟ್‌ ನಿರೂಪಕ ಪ್ರತಿಪಾದಿಸಿದ್ದಾರೆ. ಅಲ್ಲದೆ ಭಾರತ ತಂಡವನ್ನು ಆಯ್ಕೆ ಮಾಡಿದ ಅಜಿತ್‌ ಅಗರ್ಕರ್‌ ಸಾರಥ್ಯದ ಬಿಸಿಸಿಐ ಆಯ್ಕೆ ಸಮಿತಿಯನ್ನು ಇದೇ ವೇಳೆ ಆಕಾಶ್‌ ಚೋಪ್ರಾ ಶ್ಲಾಘಿಸಿದ್ದಾರೆ.

ಏಷ್ಯಾ ಕಪ್‌ ಭಾರತ ತಂಡಕ್ಕೆ ಬಂದಾಗಿನಿಂದ ಶುಭಮನ್‌ ಗಿಲ್‌ ಅವರು ಚುಟುಕು ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನವನ್ನು ತೋರುತ್ತಿಲ್ಲ. ಅವರನ್ನು ಉಪ ನಾಯಕನಾಗಿ ಆಯ್ಕೆ ಮಾಡಿ, ಅಭಿಷೇಕ್‌ ಶರ್ಮಾ ಜೊತೆ ಇನಿಂಗ್ಸ್‌ ಆರಂಭಿಸಲು ಆಯ್ಕೆ ಮಾಡಲಾಗಿತ್ತು. ಆದರೆ, ಅವರು ಈ ವರ್ಷ ಆಡಿದ 15 ಟಿ20ಐ ಪಂದ್ಯಗಳಿಂದ ಕೇವಲ 25.24ರ ಸರಾಸರಿಯಲ್ಲಿ ರನ್‌ ಗಳಿಸಿದ್ದಾರೆ. ಭಾರತ ಟೆಸ್ಟ್‌ ಹಾಗೂ ಏಕದಿನ ತಂಡದ ನಾಯಕ ಶುಭಮನ್‌ ಗಿಲ್‌ ಅವರನ್ನು ಟಿ20 ವಿಶ್ವಕಪ್‌ ತಂಡದಿಂದ ಕೈ ಬಿಟ್ಟ ನಿರ್ಧಾರ ಧೈರ್ಯಶಾಲಿ ಹಾಗೂ ಸರಿಯಾದ ನಿರ್ಧಾರವಾಗಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!