ಉದಯವಾಹಿನಿ, ನವದೆಹಲಿ: ಪವರ್ ಶೇರಿಂಗ್ ವಿಚಾರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ವೈರಾಗ್ಯದ ಮಾತನ್ನು ಆಡಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್‌ ಅಂಗಳಕ್ಕೆ ಚೆಂಡು ಎಸೆದರೆ ಡಿಕೆಶಿ ನಾನು ಹೈಕಮಾಂಡ್‌ನವರಿಗೆ ತೊಂದರೆ ಕೊಡಲು ಹೋಗುವುದಿಲ್ಲ ಎಂದಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ರಾಹುಲ್‌ಗಾಂಧಿ ಅವರಿಗೆ ತೊಂದರೆ ಕೊಡಲು ಬಯಸುವುದಿಲ್ಲ. ನಾನು ಪಕ್ಷದ ಕಾರ್ಯಕರ್ತನಾಗಿಯೇ ಇರಲು ಬಯಸುತ್ತೇನೆ ಎಂದು ಹೇಳಿದ್ದಾರೆ. ದೆಹಲಿಯಲ್ಲಿ ನಾನು ಯಾರನ್ನು ಭೇಟಿ ಮಾಡಿಲ್ಲ. ವಿದೇಶದಿಂದ ರಾಹುಲ್‌ ಗಾಂಧಿ ನಿನ್ನೆ ಆಗಮಿಸಿದ್ದು ಅವರಿಗೆ ಈಗ ತೊಂದರೆ ನೀಡಲು ಹೋಗುವುದಿಲ್ಲ. ನಾನು ಪಕ್ಷದ ಕಾರ್ಯಕರ್ತನ್ನಾಗಿ ಇರಲು ಇಷ್ಟಪಡುತ್ತೇನೆ ಎಂದು ವೈರಾಗ್ಯದ ಮಾತನ್ನು ಆಡಿದರು.

 

Leave a Reply

Your email address will not be published. Required fields are marked *

error: Content is protected !!