ಉದಯವಾಹಿನಿ, : ಸಿಯಾಚಿನ್‌ ನೀರ್ಗಲ್ಲಿನಲ್ಲಿ ಬುಧವಾರ ನಸುಕಿನ 3 ಗಂಟೆಯಲ್ಲಿ ನಡೆದಿರುವ ಬೆಂಕಿ ಆಕಸ್ಮಿಕದಲ್ಲಿ ಒಬ್ಬರು ಸೇನಾಧಿಕಾರಿ ಮೃತಪಟ್ಟಿದ್ದು, ಮೂವರು ಯೋಧರು ಗಂಭೀರ ಗಾಯಗೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಸೇನೆಯ ರೆಜಿಮೆಂಟಲ್ ವೈದ್ಯಾಧಿಕಾರಿ, ಕ್ಯಾಪ್ಟನ್ ಅಂಶುಮನ್ ಸಿಂಗ್ ಅವರು ಗಂಭೀರ ಸುಟ್ಟ ಗಾಯಗಳಿಂದ ಮೃತರಾಗಿದ್ದಾರೆ.

ಉಳಿದ ಮೂವರು ಯೋಧರಿಗೆ ಎರಡನೇ ಹಂತದ ಸುಟ್ಟಗಾಯಗಳಾಗಿದ್ದು, ಹೊಗೆ ಉಸಿರಾಡಿ ಗಂಭೀರ ಸ್ಥಿತಿಯಲ್ಲಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳನ್ನು ಸ್ಥಳಾಂತರಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅವರು ತಿಳಿಸಿದ್ದಾರೆ

Leave a Reply

Your email address will not be published. Required fields are marked *

error: Content is protected !!